SEARCH HERE

Tuesday 1 January 2019

ಗಣಪತಿಗೆ 21 ನಮಸ್ಕಾರಗಳು ಏಕೆ ganapati 21 namaskara



ಗಣಪತಿಗೆ 21 ನಮಸ್ಕಾರಗಳು ಏಕೆ ಮಾಡಬೇಕು


ನಮ್ಮ ದೇಹದಲ್ಲಿರುವ ಈ ಕೆಳಗಿನ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಮತ್ತು ಅವುಗಳು ವೃದ್ಧಿಯಾಗಲು ಮಾಡುತ್ತೇವೆ. ಎಡಗೈಯಿಂದ ಬಲ ಕಿವಿ, ಬಲಗೈಯಿಂದ ಎಡ ಕಿವಿ ಹಿಡಿದುಕೊಂಡು ದೇಹ ನೇರವಾಗಿ ಕುಳಿತು ಹೇಳಬೇಕು

5 ಪಂಚ ಭೂತಗಳು (ಭೂಮಿ, ನೀರು, ಅಗ್ನಿ, ವಾಯು, ಆಕಾಶ)
5 ಪಂಚೇಂದ್ರಿಯಗಳು (ಕಣ್ಣು, ಕಿವಿ, ಮೂಗು, ನಾಲಿಗೆ, ಚರ್ಮ)

5 ಕರ್ಮೇಂದ್ರಿಯಗಳು (ಕೈ, ಕಾಲು, ಬಾಯಿ, ಗುದ, ಗುಹ್ಯ)

5 ಪಂಚ ತನ್ಮ0ತೃಗಳು ( ರೂಪ, ಶಬ್ಧ, ಗಂಧ, ರಸ, ಸ್ಪರ್ಶ) 
1 ಮನಸು.
14ವರ್ಷದ ಮಕ್ಕುಳು 14 ನಮಸ್ಕಾರ, 14ಕ್ಕೆ ಮೇಲ್ಪಟ್ಟುವರು 21 ನಮಸ್ಕಾರ ಮಾಡಿದರೆ ಒಳ್ಳೇದು. ಮದುವೆ ಆದಂತಹವರು ಉತ್ತರ ದಿಕ್ಕಿಗೆ ಮುಖಮಾಡಿ ಹಾಗೂ ವಯಸ್ಕರು ಮತ್ತು ಮಕ್ಕಳು ಪೂರ್ವದಿಕ್ಕೆಗೆ ಮುಖ ಮಾಡಿ ಗಣೇಶ ನಮಸ್ಕಾರ ಮಾಡಿದರೆ ಒಳ್ಳೇದು.

💠🕉💠ಗರಿಕೆಯ ಹಿನ್ನೆಲೆ ಮತ್ತು ಮಹತ್ವ💠🕉💠

🚩ಯಾಕೆ ಗರಿಕೆ ಹುಲ್ಲಿಗೆ ಪೂಜೆಯಲ್ಲಿ ಅತ್ಯಂತ ಪ್ರಾಮುಖ್ಯತೆ ಮತ್ತು ಶ್ರೇಷ್ಠತೆಯನ್ನು ನೀಡಲಾಗುತ್ತದೆ. ಗರಿಕೆಯು ದೇವರಾದ ಶಿವ, ದೇವಿ ಶಕ್ತಿ ಮತ್ತು ಗಣೇಶ ದೇವರನ್ನು ಒಟ್ಟಾಗಿ ಸೇರಿಸುತ್ತದೆ.ಗರಿಕೆಯ ಹಿಂದಿರುವ ಕಥೆ ಇಲ್ಲಿದೆ ಓದಿ

🚩ಹಿಂದೂ ಧರ್ಮದಲ್ಲಿ ಗರಿಕೆಯಿಲ್ಲದೆ ಯಾವ ಪೂಜೆಯು ಸಂಪೂರ್ಣವಾಗುವುದಿಲ್ಲ. ಪವಿತ್ರವಾದ ಗರಿಕೆಯನ್ನು ಮೊದಲು ಪೂಜಿತನಾದ ಗಣೇಶನಿಗೆ ಅರ್ಪಿಸಲೇಬೇಕು. ಪೂಜೆಯಲ್ಲಿ ಪವಿತ್ರವಾದ ಸ್ಥಾನವನ್ನು ಮೊದಲು ತುಳಸಿ ಗಿಡಕ್ಕೆ ನೀಡಲಾಗಿದೆ. ತುಳಸಿಯ ನಂತರ ಗರಿಕೆ ಹುಲ್ಲಿಗೆ ಎರಡನೇ ಸ್ಥಾನ ನೀಡಲಾಗಿದೆ. ತುಳಸಿ ಮತ್ತು ಗರಿಕೆ ಎರಡೂ ಸಹ ಪವಿತ್ರವೆಂದು ಭಾವಿಸಲಾಗಿದೆ. ಗಣೇಶನ ಪೂಜೆಯಲ್ಲಿ ಗರಿಕೆಯು ವಿಶೇಷ ಸ್ಥಾನವನ್ನು ಪಡೆದಿದೆ.

🚩ಗರಿಕೆಯು ಎಲೆಗಳು ಮೂರು ಕತ್ತಿಗಳ ಆಕಾರದ ರೀತಿಯಲ್ಲಿ ಮೊದಲು ಚಿಗುರೊಡೆಯುತ್ತವೆ. ಆ ಮೂರು ಗರಿಕೆಯ ಎಲೆಗಳು ಸಹ ಮೂರು ದೇವ ತತ್ವಗಳಾದ ಶಿವ, ಶಕ್ತಿ,ಮತ್ತು ಗಣೇಶನನ್ನು ಪ್ರತಿಬಿಂಬಿಸುತ್ತವೆ.

🚩ಗರಿಕೆಯ ಹುಲ್ಲಿಗೆ ಗಣೇಶ ದೇವರ ಆತ್ಮವನ್ನು ಆಕರ್ಷಿಸುವ ಶಕ್ತಿಯಿದೆ ಹಾಗೆ ದೇವರ ತತ್ವಗಳನ್ನು ನೀರಿನ ಹನಿಗಳ ಮೂಲಕ ಗರಿಕೆಯ ಎಲೆಗಳಿಗೆ ಹೀರಿಕೊಳ್ಳುವ ಸಾಮರ್ಥ್ಯ ಇದೆ. 21 ಗರಿಕೆಯನ್ನು ಗಣೇಶ ದೇವನಿಗೆ ಪೂಜೆ ಮಾಡುವಾಗ ಅರ್ಪಿಸಿ ಭಕ್ತಿಯಿಂದ ಪೂಜಿಸುವುದರಿಂದ ಅದೃಷ್ಟವನ್ನು ಹೊತ್ತು ತರುವುದು ಎಂದು ನಂಬಲಾಗಿದೆ.

🌼ಗರಿಕೆಯ ಗಿಡವನ್ನು ಗುರುತಿಸುವುದು ಹೇಗೆ ?🌼

🚩ಗರಿಕೆಯು ಒಂದೇ ಬೇರಿನಲ್ಲಿ ಮೊದಲು ಮೂರು ಉದ್ದನೆಯ ಎಲೆಗಳಾಗಿ ಬೆಳೆದು ನಂತರ ಮೂರ್ನಾಲ್ಕು ಗಂಟುಳಾಗಿ ಅಲ್ಲಿಂದ ಎಲೆಗಳು ಚಿಗುರೊಡೆದು ಮತ್ತೆ ಉದ್ದಕ್ಕೆ ಬೆಳೆಯುತ್ತವೆ. ಗರಿಕೆಯ ಎಲೆಯನ್ನು ನೀವು ಒಂದು ವೇಳೆ ಪೂಜೆಗೆ ಕಿತ್ತರೂ ಸಹ ಅದು ಬೇಗ ಬೇಗನೇ ಚಿಗುರೊಡೆದು ಮರುಹುಟ್ಟು ಪಡೆದು ಪುನರ್ಜೀವ ಪಡೆಯುವುದು.

🌺ಗರಿಕೆ ಹುಲ್ಲಿನ ಕಥೆ.🌺

🚩ಒಂದು ಕಾಲದಲ್ಲಿ ಒಬ್ಬ ರಾಕ್ಷಸ ಅನಲಾಸುರ ಇದ್ದನು. ಅವನು ಸ್ವರ್ಗದಲ್ಲಿ ಆತಂಕ ಉಂಟು ಮಾಡಿದನು.ಅವನ ಕಣ್ಣಿನಿಂದ ಬರುವ ಬೆಂಕಿಯು ಅವನ ದಾರಿಯಲ್ಲಿ ಯಾರೇ ಬಂದರು ಏನೇ ಬಂದರು ಎಲ್ಲವನ್ನು ಸುಟ್ಟು ಹಾಕುತ್ತಿದ್ದನು. ಹೀಗೆ ಎಲ್ಲವನ್ನು ನಾಶ ಮಾಡುತ್ತಿದ್ದನು. ಆಗ ದೇವನಾದ ಗಣೇಶನನ್ನು ಸಹಾಯಕ್ಕೆ ಆಹ್ವಾನಿಸಲಾಗುತ್ತದೆ.

🚩ಗಣೇಶ ಮತ್ತು ರಾಕ್ಷಸ ಅನಲಾಸುರ ಇಬ್ಬರು ಯುದ್ಧ ಮಾಡುತ್ತಾರೆ. ಆಗ ಅನಲಾಸುರನು ಬೆಂಕಿಯ ಉಂಡೆಗಳನ್ನು ಗಣೇಶನ ಮೇಲೆ ಎಸೆಯುತ್ತಾನೆ. ಆಗ ಗಣೇಶನು ಇವನನ್ನು ಸಂಹಾರ ಮಾಡಲು ವಿರಾಟ ರೂಪವನ್ನು ಪಡೆದು ಸಂಪೂರ್ಣವಾಗಿ ಅನಲಾಸುರನನ್ನು ನುಂಗಿಬಿಟ್ಟನು.ಆಗ ಗಣೇಶನ ದೇಹದಲ್ಲಿ ಅಧಿಕವಾದ ಉಷ್ಣಾಂಶ ಉತ್ಪತ್ತಿಯಾಗಿ ಗಣೇಶನ ಹೊಟ್ಟೆಯು ಸಹ ಊದಿಕೊಂಡು ಬಿಡುವುದು.ಗಣೇಶನು ಈ ದೇಹದ ಉಷ್ಣಾಂಶದಿಂದ ದೇಹಾಲಾಸ್ಯದಿಂದ ಸುಧಾರಿಸಿಕೊಳ್ಳುವುದಕ್ಕೆ ಹರ ಸಾಹಸ ಪಡುತ್ತಿದ್ದನು.

🚩ದೇವತೆಗಳಾದ ಬ್ರಹ್ಮ, ವಿಷ್ಣು ಮಹೇಶ್ವರ,ಸೂರ್ಯ, ಚಂದ್ರ, ಎಲ್ಲರೂ ಗಣೇಶನ ನೋವು ಕಡಿಮೆ ಮಾಡುವುದಕ್ಕೆ ಬಂದರು ಏನು ಮಾಡಿದರೂ ಹೊಟ್ಟೆ ನೋವು ಗಣೇಶನಿಗೆ ಕಡಿಮೆ ಯಾಗುವುದಿಲ್ಲ.

ಕೊನೆಗೆ ಋಷಿ ಮುನಿಗಳು 21 ಗರಿಕೆಯನ್ನು ತೆಗೆದುಕೊಂಡು ಬಂದು ಗಣೇಶನ ತಲೆಯ ಮೇಲೆ ಇಡುತ್ತಾರೆ. ಆಗ ಗಣೇಶನ ದೇಹದ ಉಷ್ಣಾಂಶವೆಲ್ಲವೂ ಹಾವಿಯಾಗಿ ಮಾಯಾಜಾಲವಾಗಿ ಕಡಿಮೆಯಾಗುತ್ತದೆ. ಗಣೇಶನು ಸಹ ಗುಣ ಮುಖನಾಗುತ್ತಾನೆ.

🏵ಎಂತಹ ಗರಿಕೆಯನ್ನು ಗಣೇಶನಿಗೆ ಅರ್ಪಿಸಬಾರದು ?🏵

ಗಣೇಶನಿಗೆ ಹೂವು ಹೊಡೆದ ಗರಿಕೆಯನ್ನು ಅರ್ಪಿಸಬಾರದು. ಯಾಕೆಂದರೆ ಎಲೆಗಳು ಹಣ್ಣಾಗಿ ಹೋಗಿರುತ್ತವೆ ಬಣ್ಣವೂ ಸ್ವಲ್ಪ ಬದಲಾಗುತ್ತದೆ. ಆದ್ದರಿಂದ ಅಂತಹ ಹಣ್ಣಾಗಿ ಹೂವು ಬಿಟ್ಟ ಗರಿಕೆಯ ಹುಲ್ಲನ್ನು ಪೂಜೆಗೆ ಬಳಸಬಾರದು. ಗರಿಕೆಯಲ್ಲಿರುವ ಜೀವಶಕ್ತಿಯ ಉಲ್ಲಾಸ ಕೂಡ ಕಡಿಮೆಯಾಗಿರುತ್ತದೆ. ಗರಿಕೆಯಲ್ಲಿರುವ ದೇವತೆಗಳನ್ನು ಆಕರ್ಷಿಸುವ ಶಕ್ತಿ ಸಾಮರ್ಥ್ಯ ಕೂಡ ಕಡಿಮೆ ಆಗಿರುವುದು. ಆದ್ದರಿಂದ ಹೂವು ಹೊಡೆದ ಗರಿಕೆಯು ಪೂಜೆಗೆ ಬಳಸಬಾರದು.

🍃🌴ಗರಿಕೆಯ ಆರ್ಯುರ್ವೇದ ಗುಣ ಹಾಗೂ ವಿಶಿಷ್ಟ ಹಿನ್ನೆಲೆ.🌴🍃

🚩ತೇನ ವಿನಾ ತೃಣಮಪಿ ನ ಚಲತಿ ಅಂದರೆ ಭಗವಂತನ ಚಿತ್ತವಿರದೆ ಹುಲ್ಲುಕಡ್ಡಿಯೂ ಅಲುಗಾಡದು ಎಂಬ ನುಡಿಗಟ್ಟಿನ ಹಿಂದೆ ಹುಲ್ಲಿನ ಬಗ್ಗೆ ಕೊಂಚ ಕೀಳರಿಮೆ ಇದೆ ನಿಜ. ಆದರೆ ವರ್ಷಕ್ಕೊಮ್ಮೆ ಗೌರಿ-ಗಣಪನ ಮಡಿಗೇರುವ ಗರಿಕೆಯದು ಮಾತ್ರ ವಿಶಿಷ್ಟ ಹಿನ್ನೆಲೆ.

🚩ನಮ್ಮ ರಾಜ್ಯದ ದಕ್ಷಿಣದ ಕೊಡಿನಾಡು ಕೊಡಗು. ಆ ಜಿಲ್ಲೆಯ ತುತ್ತ ತುದಿಯ ಪುಟ್ಟ ಹಳ್ಳಿಯ ಹೆಸರೇ ಕರಿಕೆ. ಅದರ ಹಿಂದೆ ಗರಿಕೆಯ ಹೆಸರೇ ಇದೆ. ಇತರ ದೇಶಗಳಲ್ಲಿ ಗರಿಕೆ ಒಂದು ಕಳೆ. ನಮಗೆ ಪೂಜಾರ್ಹ ಹುಲ್ಲು. ಅದರ ನಾನಾ ಬಳಕೆಗಳ ದೊಡ್ಡ ಪಟ್ಟಿ ಆಯುರ್ವೇದದ ಸಂಸ್ಕೃತಗ್ರಂಥಗಳಲ್ಲಿವೆ.

🚩ಅನಿಯಮಿತ ಮುಟ್ಟಿನ ಸ್ರಾವದ ಹಿಂದೆ ಗರ್ಭಾಶಯದ ಒಳಗಂಟು(ಫೈಬ್ರಾಯಿಡ್) ಪ್ರಬಲ ಕಾರಣ. ಅಂತಹ ಸಂದರ್ಭಗಳಲ್ಲಿ ದಾಳಿಂಬೆ ಸಿಪ್ಪೆ ಕಷಾಯ ಮತ್ತು ಗರಿಕೆಯ ರಸದ ಕುಡಿಸುವ ಮನೆ ಮದ್ದು ರೂಢಿಯಲ್ಲಿದೆ.

🚩ಅನೇಕರಿಗೆ ಗರ್ಭಕೋಶದ ಶಸ್ತ್ರ ಕ್ರಿಯೆ ನಡೆಸದಂತೆ ಗರಿಕೆ ರಸಸೇವನೆ ಒಳಿತು ಮಾಡಿದೆ. ಅಂದರೆ ಕಲ್ಲು, ಲೋಹ ಕರಗಿಸುವ ಗರಿಕೆ ಜೀವಂತ ಒಡಲ ಪುಟ್ಟ ಗಂಟು ಕರಗಿಸಿದರೆ ಅಚ್ಚರಿ ಇಲ್ಲ. ಮಹಿಳೆಯರ ತಿಂಗಳ ತೊಂದರೆ ಪರಿಹರಿಸಲು ಗರಿಕೆ ಸಂಜೀವಿನಿ.

🚩ಗಂಡದೂರ್ವಾ, ಗಂಡಾಲಿ, ಶತವೀರ್ಯಾ, ಗೋಲೋಮಿ, ಮತ್ಸ್ಯ ಶಕುಲಾದನೀ ಇತ್ಯಾದಿ ಪರ್ಯಾಯ ಹೆಸರು ಗರಿಕೆಯದು. ಇಲ್ಲಿ ಗಂಡ ಅಂದರೆ ಗಿಣ್ಣು ಅಥವಾ ಗಂಟು. ಗಂಟು ಗಂಟುಗಳಲ್ಲಿ ಬೇರು. ಅಲ್ಲಿಯೇ ಹೊಸ ಕವಲು. ಅದನ್ನೇ ಉಪನಿಷದ್ಗಳು ಕಾಂಡಾತ್ ಕಾಂಡಾತ್ ಪ್ರರೋಹಂತಿ ಎಂಬ ಸುಂದರ ಬಣ್ಣನೆಯೊಂದಿಗೆ ಸಸ್ಯಶಾಸ್ತ್ರೀಯ ವರ್ಣನೆ ಮಾಡುತ್ತವೆ.

🚩ಹಸುಗಳು ಅತಿಯಾಗಿ ಇಷ್ಟ ಪಡುವ ವಸ್ತು ಗರಿಕೆ, ಒಂದು ಹುಲ್ಲು ನೂರು ಗುಣ ಎಂಬ ಗರಿಕೆಯ ಅತಿಶಯೋಪಕಾರ ಕಾಣುವೆವು. ನಿಮ್ಮ ಮನೆಯ ನಾಯಿ ಹರಿಕೆ ಹುಲ್ಲನ್ನು ಮೆಲ್ಲುವ ಮತ್ತು ಕೆಲವೊಮ್ಮೆ ಉದರಶುದ್ಧಿ ಮಾಡಿಕೊಳ್ಳುವ ಪ್ರಕೃತಿ ಚಿಕಿತ್ಸೆ ಕಂಡಿದ್ದೀರಿ. ಚರಕಸಂಹಿತೆಯ ಜೀವನೀಯ, ಅಂದರೆ ಜೀವನಕ್ಕೆ ಉಪಕರಿಸುವ ಗಣ(ಗುಂಪು)ದಲ್ಲಿ ಗರಿಕೆಗೆ ಇದೆ.

🚩ಜ್ವರ, ಮೈಉರಿ, ಕಫ ಉಲ್ಬಣತೆ, ಚರ್ಮಗಾದರಿ, ಗುಳ್ಳೆ, ನೀರೂಡುವ ತುರಿಗಜ್ಜಿ, ಸರ್ಪಸುತ್ತು ಪರಿಹಾರಕ್ಕೆ ಗರಿಕೆ ಮದ್ದು. ಬಾಯಿ ರುಚಿ ಹೆಚ್ಚಿಸೀತು. ವಾಂತಿಗೆ ಕಡಿವಾಣ. ಮೂರ್ಛೆ ತಿಳಿವಿಗೆ ಗರಿಕೆರಸದ ಮೂಗಿನ ಬಳಕೆಗೆ ಉಲ್ಲೇಖಗಳಿವೆ.

🚩ಎಂತಹದೇ ರಕ್ತಸ್ರಾವ ನಿಲುಗಡೆಗೆ ಗರಿಕೆ ಬೇಕು. ವಿಷಚಿಕಿತ್ಸೆಗೆ ಗರಿಕೆ ಉತ್ತಮ ಮದ್ದು. ಕೇರುಗಾಯದ ಮದ್ದಾಗಿ ಗರಿಕೆರಸದ ಲೇಪ ಬಯಲು ಸೀಮೆಯ ಜನಪದ ವೈದ್ಯ. ಮೂತ್ರಕಟ್ಟು, ಉರಿ ಮತ್ತು ಕಲ್ಲುಪರಿಹಾರಕ್ಕೆ ಗರಿಕೆ ರಸ ಪಾನ ಚಿಕಿತ್ಸೆಯಾಗಿದೆ.

🚩ಗರಿಕೆಯ ತುದಿ ಚಿಗುರು ಆಯ್ದು ತರುವಿರಿ. ಬರೋಬ್ಬರಿ ನೂರೆಂಟು ಗಂಟು! ಅಂತಹ ಗರಿಕೆ ಚಿಗುರಿನ ಹಾರ ಗಣಪನಿಗರ್ಪಿಸಿರಿ. ಆದರೆ ಅದನ್ನು ಮರುದಿನ ಮೋರಿಗೆ ಎಸೆಯದಿರಿ.

🚩ನೂರೈವತ್ತು ವರ್ಷಗಳ ಹಿಂದೆ ನಮ್ಮ ನೆಲದಲ್ಲಿ ಒಂದು ಪುಸ್ತಕ ಸಂಪದಿತ. ಅದರ ಹೆಸರು ‘ಸಹಸ್ರಾರ್ಧ ವೃಕ್ಷಾದಿ ವರ್ಣನಂ.’ ಅಂದರೆ ಐನೂರು ಗಿಡ ಮರಗಳ ಬಣ್ಣನೆ. ಹಾರದ ಗರಿಕೆ ಆಹಾರವಾಗುವ ಸುಂದರ ವರ್ಣನೆ ಅಂತಹ ಗ್ರಂಥದ ಅಮೂಲ್ಯ ಮಾಹಿತಿ.

🚩ಗರಿಕೆರಸ ಕುಡಿಯುವ ನೀವು ಗರಿಕೆ ಹಾರದ ಪಲ್ಯ ಮಾಡಿ ಆಹಾರವಾಗಿ ಬಳಸಿರಿ. ಕಲ್ಲು ಕರಗಿಸುವ ಈ ಹುಲ್ಲು ಗಣಪನ ಹಬ್ಬದ ಉಂಡೆ, ಚಕ್ಲಿ, ಕೋಡುಬಳೆ, ಒಬ್ಬಟ್ಟು ಕರಗಿಸೀತಲ್ಲವೇ? ಈ ಗ್ರಂಥದ ಮತ್ತೊಂದು ಮಾಹಿತಿ ಕೂಡ ಸ್ವಾರಸ್ಯದ್ದೇ. ಗರಿಕೆಯ ಬೇರಗೆದು ತೆಗೆಯಿರಿ. ಬೆಲ್ಲದ ಪಾನಕ ಮಾಡಿ ಕುಡಿಯಿರಿ. ಅದು ಬಹಳ ತಂಪು. ಆದರೆ ಬೇರಗೆಯುವ ಕೆಲಸ ಮಾತ್ರ ಸುಲಭದ್ದಲ್ಲ.

🌹ಗರಿಕೆಯ ಹುಲ್ಲಿನಿಂದ ಒಂದು ದೊಡ್ಡ ಸಾಮ್ರಾಜ್ಯದ ಸ್ಥಾಪನೆಯ ಕತೆ ಗೊತ್ತೇ?🌹

🚩ನಂದ ರಾಜ್ಯದ ರಾಜಕುಮಾರರು ಒಮ್ಮೆ ರಸ್ತೆಯಲ್ಲಿ ನಡೆದು ಹೋಗುತ್ತಿದ್ದರು. ಒಬ್ಬ ಬ್ರಾಹ್ಮಣ ರಸ್ತೆ ಪಾಟಲಿಪುರದ ಹೆದ್ದಾರಿಯ ಗರಿಕೆಗೆ ತೊಡರಿಕೊಂಡು ಎಡವಿದ. ಆತನ ಶಿಖೆ ಬಿಚ್ಚಿಹೋಯಿತು. ಅದನ್ನು ಕಂಡ ರಾಜಕುಮಾರರು ಬಿದ್ದು ಬಿದ್ದು ಕೇಕೆ ಹಾಕಿ ನಗತೊಡಗಿದರು.

🚩ಆಗ ಸಿಟ್ಟಿಗೆದ್ದ ಬ್ರಾಹ್ಮಣ ಹೀಗೆಂದನು: ‘ಎಲವೋ ದುಷ್ಟರೇ, ಇಂತಹ ರಾಜಪಥದಲ್ಲಿ ಗರಿಕೆಯ ಹುಲ್ಲು ಸ್ವೇಚ್ಛೆಯಾಗಿ ಬೆಳೆಯಲು ನಿಮ್ಮ ಅರಾಜಕತೆ ಕಾರಣ.

ಇಂದು ನನ್ನ ಬಿಚ್ಚಿದ ಶಿಖೆ ಕಟ್ಟಲಾರೆ. ನಿಮ್ಮ ನಂದವಂಶ ನಿರ್ವಂಶ ಮಾಡದೆ ಇರಲಾರೆ. ಇಗೋ ನೋಡಿರಿ. ಈ ಗರಿಕೆಯನ್ನು ಬುಡ ಸಮೇತ ಕಿತ್ತು ಹಾಕುವೆನು. ಇಲ್ಲಿ ಬೆಂಕಿ ಹಾಕಿ ಸುಡುವೆನು. ಮತ್ತೆ ಇಂತಹ ಹುಲ್ಲು ಇಲ್ಲಿ ಹುಟ್ಟದಿರಲಿ. ನಿಮ್ಮಂತಹ ದುಷ್ಟರು ಮತ್ತೆ ನಮ್ಮ ನೆಲ ಆಳದಿರಲಿ.’ ಕೂಡಲೇ ನೆಲ ಬಗೆದು ಬ್ರಾಹ್ಮಣ ಗರಿಕೆ ತರಿದನು.

🚩ಆಗ ಅಲ್ಲಿಗೆ ಚಂದ್ರಗುಪ್ತ ಆಗಮಿಸಿದನು. ಅನಂತರ ನಂದ ಸಾಮ್ಯಾಜ್ಯದ ಅಳಿವು, ಗುಪ್ತರ ಸ್ಥಾಪನೆ ಇತಿಹಾಸದ ಪುಟಗಳು. ಜುಟ್ಟು ಬಿಚ್ಚಿ ಶಪಥ ಮಾಡಿದಾತನೇ ಚಾಣಕ್ಯ. ಅರ್ಥಶಾಸ್ತ್ರ ಗ್ರಂಥದ ಕರ್ತೃ. ಭಾರತದಲ್ಲಿ ಹೊಸ ಶಕೆಗೆ ಗರಿಕೆಯ ಹುಲ್ಲು ಕಾರಣವಾದ ಕತೆ ಇದು.

🚩ಸಾಸಿವೆಗಿಂತಲೂ ಕಿರಿದಾದ ಗರಿಕೆ ಬೀಜ ಯಥೇಚ್ಛ ಬೆಳೆದರೆ ಎರಡೂವರೆ ಚದರ ಮೀಟರ್ ಹರಹು ಪಡೆಯಬಲ್ಲುದು. ಕೇವಲ ಐದು ತಿಂಗಳಲ್ಲಿ ಅಂತಹ ಬೆಳೆ. ಐದಡಿ ತಳಕ್ಕಿಳಿವ ಬೇರು! ಸಮುದ್ರ ತಟದ ಉಪ್ಪು ನೀರು ಸಹ ಗರಿಕೆಯ ಕೆಚ್ಚಡಗಿಸದು. ಬಂಜರು ನೆಲದಲ್ಲೂ ಗರಿಕೆ ಬೆಳೆದೀತು.

*********

No comments:

Post a Comment