SEARCH HERE

Tuesday, 1 January 2019

ಶ್ರೀಚಕ್ರ ಶ್ರೀ ಚಕ್ರ sri shree chakra





ಯಂತ್ರಗಳಲ್ಲೇ ಅತ್ಯಂತ ಶ್ರೇಷ್ಠ ಅಂದರೆ ಶ್ರೀಚಕ್ರ ,. ಅದಕ್ಕೆ ಶ್ರೀ ಶಂಕರಾಚಾರ್ಯರು ಆನಂದ ಲಹರಿಯಲ್ಲಿ ಈ ರೀತಿಯಾಗಿ  ದೇವಿಯನ್ನು ವರ್ಣಿಸಿದ್ದಾರೆ.
चतुर्थिः श्री कण्ठेः, शिवयुवतिभिः पंच भिरपि। प्र
भिन्नाभिः शम्भोर्नवभिरपि मूल प्रकृतिभिः!
त्रयश्चत्वारिशद्बसुदल कलाब्जत्रिविलय। 

त्रिरेखाभिः साधेः तव मव कोणः परिणताः !!

ಮೊಟ್ಟ ಮೊದಲು ಶಂಕರಾಚಾರ್ಯರು ಶ್ರೀ ಚಕ್ರ ವನ್ನು ಸ್ಥಾಪನೆ ಮಾಡಿದ್ದು ಮಧುರೈ ಮೀನಾಕ್ಷೀ ದೇವಸ್ಥಾನದಲ್ಲಿ .  ಕಾಳಿ ಸ್ವರೂಪದಲ್ಲಿದ್ದ ದೇವಿಯನ್ನು  ತಮ್ಮ  ಸ್ತೋತ್ರ ಗಳಿಂದ ಸಂಪನ್ನಗೊಳಿಸಿದರು , ಆ ಕಾಳಿ ಸ್ವರೂಪದಲ್ಲಿದ್ದ ಮಧುರೆ ಮೀನಾಕ್ಷೀ ದೇವಿಯನ್ನು  ಬಾಲಕ ಸಾಕ್ಷಾತ್ ಪರಮೇಶ್ವರನ ಸ್ವರೂಪ ಶಂಕರಾಚಾರ್ಯರು  ಪಗಡೆ ಆಟದ ನೆಪದಲ್ಲಿ  ಮಂತ್ರಶಕ್ತಿಯಿಂದ ಗೆರೆಗಳನ್ನು ಎಳೆದು  ದೇವಿಯನ್ನು ಅದರಲ್ಲಿ ಬಂಧಸಿದ್ದರು.  ಕಾಳಿ ಸ್ವರೂಪದಲ್ಲಿದ್ದ ಮಧುರೈ ಮೀನಾಕ್ಷೀಗೆ  ತಾನು ಗೆರೆಗಳ ಮಧ್ಯೆ  ಬಂಧನವಾಗಿದ್ದು ಅರಿವಿಗೆ ಬಂದಾಗ ಈತ  ಸಾಧಾರಣ ಬಾಲಕನಲ್ಲ  ಅಂತ ತಿಳಿದು,  ತನ್ನನ್ನ ಬಂಧನದಿಂದ ಮುಕ್ತಗೊಳಿಸು ಅಂತ ಕೇಳಿಕೊಳ್ಳುತ್ತಾಳೆ. ಆಗ ಶಂಕರಾಚಾರ್ಯರು  ನೀನು ಕಾಳಿ ಸ್ವರೂಪ  ಬಿಟ್ಟು ಮಾತೃ ಸ್ವರೂಪಕ್ಕೆ ಬಂದರೆ ಮಾತ್ರ  ಬಂಧನದಿಂದ ಮುಕ್ತಿಗಳಿಸುವೆ  ಅಂತ ಸವಾಲು ಹಾಕಿದಾಗ  ಆ ಮುಗ್ದ ಬಾಲಕನ ಮಂತ್ರ ಶಕ್ತಿಗೆ ತಲೆ ಬಾಗಿ ಮಾತೃ ಸ್ವರೂಪವನ್ನು ಪಡೆಯುತ್ತಾಳೆ... ಇವತ್ತಿಗೂ ನೋಡಿ  ಮಧುರೆ ಮೀನಾಕ್ಷೀ ಮಧುರವಾಗಿ ನಗುವ ಮುಖದಲ್ಲಿ  ಮಾತೃಸ್ವರೂಪದಲ್ಲೇ ಇದ್ದಾಳೆ.... ಈ ರೀತಿಯಾಗಿ ಎಲ್ಲಿ ಎಲ್ಲಿ ಶಕ್ತಿ  ಕ್ಷೇತ್ರಗಳಿವೆಯೋ ಅಲ್ಲಲ್ಲಿ ಶಂಕರಾಚಾರ್ಯರು ಶ್ರೀ ಚಕ್ರವನ್ನು ಸ್ಥಾಪನೆ ಮಾಡಿದ್ದಾರೆ ...
 ಶ್ರೀ ಚಕ್ರ ಅಂದರೆ ಅದೊಂದು ಮಂಡಲ ಮಂಡಲದ ಮದ್ಯೆ ಶ್ರೀ  . ಶ್ರೀ ಅಂದರೆ ಸಾಕ್ಷಾತ್ ಪರಮೇಶ್ವರಿಯ ವಾಸ.  ಅಂದರೆ ನವ ತ್ರಿಕೋಣ ಒಂಬತ್ತು ತ್ರಿಕೋಣದ ಮದ್ಯೆ ಬಿಂದು . ನವಶಕ್ತಿ ಸ್ವರೂಪಳಾದ ದೇವಿ  ಅದರ ಮದ್ಧ್ಯದಲ್ಲಿ ವಾಸ ಅದಕ್ಕೆ ದೇವಿಯನ್ನು ಶ್ರೀ ಚಕ್ರಾಂತರ ವಾಸಿನಿ ಅಂತ  ವರ್ಣಿಸುತ್ತಾರೆ.‌...

 ಈ ಯಂತ್ರದ. ಮೇಲ್ಮುಖ ಅಗ್ನಿ ತತ್ವವನ್ನು ಹೊಂದಿದ್ದರೆ ,  ಅದರ ಸೂತ್ತಲೂ ಇರುವ ವೃತ್ತ ವಾಯುತತ್ವವನ್ನು ಹೊಂದಿದೆ..ಮದ್ಯದ ಬಿಂದು ಜಲತತ್ವ , ಮತ್ತು  ಅದರ ತಳ ಭೂತತ್ವವನ್ನು ಹೊಂದಿದೆ...

ಸ್ಪಟಿಕದ ಶ್ರೀಚಕ್ರ ಯಂತ್ರ  ಶ್ರೇಷ್ಠ  , ನಂತರ ಬೆಳ್ಳಿ , ತಾಮ್ರ...‌‌

 ಶುಕ್ರವಾರ ,ರವಿವಾರ ಮತ್ತು ಹುಣ್ಣಿಮೆ ದಿನ  ಶ್ರೀ ಚಕ್ರ ಪೂಜೆ ಅತ್ಯಂತ ಫಲದಾಯಕ
ಯಾರ ಮನೆಯಲ್ಲಿ  ನಿತ್ಯ ಶ್ರೀ ಚಕ್ರ ಪೂಜೆ ನಡೆಯುತ್ತದೆಯೋ  ಅಲ್ಲಿ ಸಾಕ್ಷಾತ್ ಪರಮೇಶ್ವರಿಯ ವಾಸವಿರುತ್ತಾಳೆ.....ಅವರಿಗೆ ದಾರಿದ್ರ್ಯ ಬರುವದಿಲ್ಲ..
ಅಲ್ಲಿ ಶಾಂತಿ ನೆಲೆಸಿರುತ್ತದೆ . ಯಾಕೆಂದರೆ ದೇವಿಯನ್ನ ಶಾಂತಿ ಸ್ವರೂದಲ್ಲಿ ತಂದದ್ದೇ ಶ್ರೀ ಚಕ್ರದಲ್ಲಿ ....
ಯಾರ ಮನೆಯಲ್ಲಿ ಶ್ರೀ ಚಕ್ರ ಪೂಜೆ ನಡೆಯುತ್ತದೆಯೋ ಅಲ್ಲಿ ಸಂಪತ್ತಿಗೆ ಕೊರತೆ ಇರುವದಿಲ್ಲ ... 
ಪ್ರತಿ ಶುಕ್ರವಾರ ಲಲಿತಾ ಅಷ್ಟೋತ್ತರ ಸಹಿತ ಕುಂಕುಮಾರ್ಚನೆ ಮಾಡಿದರೆ  ಇಷ್ಟಾರ್ಥವೆಲ್ಲ ಸಿದ್ಧಿಸುತ್ತದೆ.  
ಶ್ರೀ ಚಕ್ರದ ಆರಾಧನೆ ನಡೆಯುವಲ್ಲಿ ಯಾವದೇ ತರಹದ ಮಾಟ ಮಂತ್ರ  ದುಷ್ಟ ಶಕ್ತಿಗಳ ಕಾಟ ನಡೆಯುವದಿಲ್ಲ . ....
ಆರೋಗ್ಯ ದೃಷ್ಟಿಯಿಂದಲೂ  ಶ್ರೀಚಕ್ರ ಪೂಜೆ ಬಹಳ ಒಳ್ಳೆಯದು...‌

ಶ್ರೀ ಚಕ್ರವನ್ನು ಖರಿದಿಸುವಾಗ  ನೋಡಿ ಮೂಲೆಗಳು ಸ್ಪಷ್ಟತೆಯಿಂದ ಕೂಡಿರಬೇಕು....
ಗೆರೆಗಳು ಅಂಕಡೊಂಕಾಗಿರಬಾದು..
ಶ್ರೀಚಕ್ರದ ಸುತ್ತಲೂ ಎಂಟು ದಳದ  ಕಮಲ ಇರಬೇಕು ನಂತರ  ಹೊರಗಡೆ ಹದಿನಾರು ದಳದ ಕಮಲವಿರಬೇಕು..‌
ಹೊಸದಾಗಿ ತಂದ ಶ್ರೀ ಚಕ್ರವನ್ನು ಯಾವುದಾದರೂ ದೇವಿ ದೇವಸ್ಥಾನದಲ್ಲಿ  ಅಭಿಷೇಕ ಪೂಜೆ ಮಾಡಿಸಿ ನಂತರ ಮನೆಯಲ್ಲಿ  ಇಟ್ಟು ಪೂಜಿಸಬೇಕು.
***
***
Shree chakra ........🙏🙏🙏🙏

ಸಾಮಾನ್ಯವಾಗಿ ಶ್ರೀಚಕ್ರದ ಹೆಸರು ಕೇಳಿರುತ್ತೀವಿ, ದೇವಿ ದೇವಾಲಯಗಳಲ್ಲಿ ಹೆಚ್ಚಾಗಿ ಶ್ರೀಚಕ್ರ ಸ್ಥಾಪಿಸಿರುತ್ತಾರೆ. ಕೆಲವಾರು ಮನೆಗಳಲ್ಲಿಯೂ ಸಹ ಶ್ರೀಚಕ್ರವನ್ನು ಇಟ್ಟು ಪೂಜಿಸುತ್ತಾರೆ, ಆರಾಧಿಸುತ್ತಾರೆ. ಇಂತಹ ಮನೆಗಳಲ್ಲಿ ದೇವಿ ನೆಲೆಸಿರುತ್ತಾಳೆ, ಇದರಿಂದ ದಾರಿದ್ರ್ಯ ನಾಶವಾಗಿ, ಸುಖ ,ಸಮೃದ್ಧಿ, ಶಾಂತಿ ನೆಲಸುತ್ತದೆ. ಅಂತಹ ಮನೆಗಳಲ್ಲಿ ನಕಾರಾತ್ಮಕ ಶಕ್ತಿಯ ಪ್ರವೇಶಕ್ಕೆ ಅಸ್ಪದವಿರುವುದಿಲ್ಲ.ಈ ಯಂತ್ರವು ಸ್ತ್ರೀ ಹಾಗೂ ಪುರುಷ ಶಕ್ತಿ (ಶಿವಶಕ್ತಿ)ಗಳೆರಡರ ಪ್ರತೀಕ. ಇದರ ಬಗ್ಗೆ ಉಪನಿಷತ್ಗಳ ಕಾಲದಿಂದಲೂ ಉಲ್ಲೇಖವಿದೆ. ಇದರ ಪೂಜೆ ಸಂಪತ್ತಿನ ಜೊತೆಗೆ ಇಹಪರಗಳೆರಡರ ಉನ್ನತಿಗೆ ಸಾಧನವಾಗಿದೆ.  ಇದನ್ನು ಪೂರ್ವಾಭಿಮುಖವಾಗಿ ಇಟ್ಟು, ಪೂಜಿಸುವವರು ಉತ್ತರಾಭಿಮುಖವಾಗಿ ಕುಳಿತು ಪೂಜಿಸಬೇಕು.

ಶ್ರೀ ಚಕ್ರ ಯಂತ್ರ ಒಂದು ಶಕ್ತಿಯುತವಾದ ಯಂತ್ರವೆನ್ನುವುದು ನಮಗೆಲ್ಲ ತಿಳಿದ ಸಂಗತಿ. ಇದು ಜಗನ್ಮಾತೆಯಾದ ದೇವಿಯನ್ನು ಪ್ರತಿನಿಧಿಸಿವ ಒಂದು ಯಂತ್ರ. ಒಂಬತ್ತು ತ್ರಿಕೋನಗಳು ಒಂದಕ್ಕೊಂದು ಬೆಸೆದುಕೊಂಡಂತೆ ಇರುವ ಈ ಯಂತ್ರವನ್ನು ನವಚಕ್ರವೆಂದೂ ಕರೆಯುತ್ತಾರೆ. ಈ ಎಲ್ಲ ತ್ರಿಕೋನಗಳೂ ಸೇರುವ ಮಧ್ಯದ ಬಿಂದುವಿನಲ್ಲಿ ನವಶಕ್ತಿ ಸ್ವರೂಪಳಾದ ದೇವಿ ನೆಲಸಿರುತ್ತಾಳೆ. ಅದರಿಂದಾಗಿಯೇ "ಚಕ್ರಾಂತರ ವಾಸಿನಿ" ಎಂದೂ ದೇವಿಯನ್ನು ವರ್ಣಿಸುತ್ತಾರೆ. ಶ್ರೀಚಕ್ರ ಯಂತ್ರದ  ಮೇಲ್ಮುಖ ಅಗ್ನಿತತ್ವವನ್ನು, ಇದರ ಸುತ್ತಲೂ ಇರುವ ವೃತ್ತ ವಾಯುತತ್ವವನ್ನು ಹೊಂದಿದ್ದರೆ  ಮಧ್ಯದ ಬಿಂದು ಜಲತತ್ವ ಮತ್ತು ಅದರ ತಳ ಭೂತತ್ವವನ್ನು ಪ್ರತಿಪಾದಿಸುತ್ತದೆ. 

ಒಂಬತ್ತು ತ್ರಿಕೋನಗಳು ಪರಸ್ಪರ ಬೆಸೆದು ಮತ್ತೆ 43 ಸಣ್ಣ ಸಣ್ಣ ತ್ರಿಕೋನಗಳಾಗುತ್ತವೆ. ಇದು ಪೂರ್ಣ ಬ್ರಹ್ಮಾಂಡದ  ಅಥವಾ ಗರ್ಭದ ಸಂಕೇತವಾಗಿ ಅದ್ವೈತ ಸಿದ್ಧಾಂತವನ್ನು ಪ್ರತಿಪಾದಿಸುತ್ತದೆ. ಶ್ರೀಚಕ್ರದ ಸುತ್ತಲೂ ಎಂಟು ದಳದ ಕಮಲವಿರುತ್ತದೆ ನಂತರ ಹೊರಗಡೆ ಹದಿನಾರು ದಳಗಳ ಕಮಲವಿರುತ್ತದೆ. ರೇಖಾಚಿತ್ರದ ಮೂಲಕ ದೇವಿಯನ್ನು ಪೂಜಿಸಬಹುದಾದ ಅತ್ಯುತ್ತಮ ವಿಧಾನಗಳಲ್ಲಿ  ಇದು ಒಂದು.

ಇದರಲ್ಲಿ (plane)ವಿಮಾನಚಕ್ರ,(pyramidal)ಗೋಪುರ ಚಕ್ರ, ಹಾಗೂ (spherical)ಗೋಲಚಕ್ರ ಮುಖ್ಯವಾದ ಮೂರು ಮುಖ್ಯ ಪ್ರಕಾರಗಳು.

ಶ್ರೀಚಕ್ರಾಕಾರದ ಮೇಲೆಯೇ ಕಟ್ಟಿರುವ ಹಲವಾರು ದೇವಾಲಯಗಳಲ್ಲಿ ತುಮಕೂರು ತಾಲೂಕಿನ ಹೆಬ್ಬುರಿನ ಕಾಮಾಕ್ಷಿ  ಶಾರದಾ ದೇವಾಲಯ ಹಾಗೂ ಇಂಡೋನೇಷಿಯಾದ  ಬೊರೋಬುದುರ್ ನಲ್ಲಿ ಇರುವ ಬೌದ್ಧ ದೇವಾಲಯಗಳೂ ಸೇರಿವೆ.

ಶ್ರೀಚಕ್ರವನ್ನು ಶಂಕರಾಚಾರ್ಯರು ಭಾರತದ ಹಲವಾರು ದೇವಾಲಯಗಳಲ್ಲಿ ಪ್ರತಿಷ್ಠಾಪನೆ ಮಾಡಿದ್ದಾರೆ. ಅದರಲ್ಲಿ ಮುಖ್ಯವಾದವುಗಳೆಂದರೆ ವಿಜಯವಾಡ- ಕನಕಾದುರ್ಗಾ , ಶೃಂಗೇರಿ-ಶಾರದಾಂಬ, ಕೊಲ್ಲಾಪುರ-ಮಹಾಲಕ್ಷ್ಮಿ, ಕಂಚಿ-ಕಾಮಾಕ್ಷಿ, ನೆಲ್ಲೂರು-ಅಂದ್ರ, ಚೆನ್ನೈ -ಕಾಮಾಕ್ಷಿ, ಶ್ರೀರಂಗಪಟ್ಟಣ-ನಿಮಿಶಾಂಭ, ಶಿವನಸಮುದ್ರ-ಮೀನಾಕ್ಷಿ, ಕೊಲ್ಲೂರು -ಮೂಕಾಂಬಿಕಾ, ಶ್ರೀಶೈಲ-ಭ್ರಮರಾಂಬ, ತಿರುವತ್ತಿಯೂರ್-ಕಾಳಿ, ಕಟೀಲು-ದುರ್ಗಾಪರಮೇಶ್ವರಿ, ಗೌಹತಿಯ ಕಾಮಾಕ್ಯ , ಕಾಶ್ಮೀರದ
-ಜಗದಂಬ ಶಾರಿಕಾಭಾಗವತಿ  ದೇವಾಲಯಗಳು ಮಖ್ಯವಾದವು. ಇದಲ್ಲದೆ ಭಾರತದಲ್ಲಿ ಬೇರೆ ಬೇರೆ ಕಡೆಗಳಲ್ಲಿಯೂ ಹಾಗೂ ನೇಪಾಳದ ಪಶುಪತಿನಾಥ ದೇವಾಲಯದಲ್ಲಿಯೂ ಶ್ರೀಚಕ್ರ ಸ್ಥಾಪನೆಯಾಗಿದೆ. 

ಉತ್ತರಕಾಂಡದ  ಆಲ್ಮೊರ ಜಿಲ್ಲೆಯ ಲಾಮಗಡದಲ್ಲಿ  ಶ್ರೀ ಕಲ್ಯಾಣಿಕಾ ಡೋಲಾಶ್ರಮದಲ್ಲಿ 1600 ಕಿಲೋ ತೂಕದ ಶ್ರೀಚಕ್ರ ಯಂತ್ರವಿದೆ. ಇದು ಅತಿ ದೊಡ್ಡ ಶ್ರೀಚಕ್ರ ಯಂತ್ರವೆಂದು ಪರಿಗಣಿಸಲಾಗಿದೆ.

ಉಗ್ರ ಸ್ವರೂಪಳಾಗಿದ್ದು, ಮಾಂಸಾಹಾರ ಭಕ್ಷಕಳಾಗಿದ್ದ ಮಾಧುರೈ ಮೀನಾಕ್ಷಿ ದೇವಿಯನ್ನು ಪಗಡೆ ಆಟದ ನೆಪದಲ್ಲಿ ಶಂಕರಚಾರ್ಯರು ಶ್ರೀ ಚಕ್ರ ಯಂತ್ರದ ಮಧ್ಯೆ ಬಂದಿಸಿದ್ದು ನಂತರ ದೇವಿ ಬಿಡುಗಡೆ ಕೇಳಿದಾಗ ಮಾಂಸಾಹಾರ ಬಿಟ್ಟು ಶಾಖಾಹಾರಿ ಆಗುವಂತೆ ಬೇಡಿಕೊಂಡು ನಂತರ ದೇವಿ ಸೌಮ್ಯ ರೂಪಳಾಗಿ ಮೀನಾಕ್ಷಿಯಾಗಿ ನೆಲಸಿದ ನಂತರ ಶಂಕರಾಚಾರ್ಯರಿಂದ ಶ್ರೀ ಚಕ್ರ ಮೊದಲು ಸ್ಥಾಪನೆಗೊಂಡದ್ದು ಮಧುರೈನಲ್ಲೇ.(ಈ ಕಥೆಯನ್ನು ವಿಸ್ತಾರವಾಗಿ ಬರೆಯುವೆ ಒಂದೆರಡು ದಿನಗಳಲ್ಲಿ) ಶಂಕರಾಚಾರ್ಯರು ಉಗ್ರಶಕ್ತಿ ಸೋಪಾನವಾಗಿದ್ದ ಶ್ರೀಚಕ್ರವನ್ನು ಪರಿಷ್ಕರಿಸಿ ಮಂಗಳಕರ ಶಕ್ತಿ ದೇವತೆಯ ಸಾತ್ವಿಕರೂಪವು ಉಗಮಿಸುವಂತೆ ಮಾಡಿದರು.

ಕ್ರಮಬದ್ಧವಾಗಿ ರಚಿಸಿದ ಶ್ರೀಚಕ್ರದ ಮೇಲೆ ಲೇಸರ್ ಕಿರಣಗಳನ್ನು ಹಾಯಿಸಿದಾಗ ಶ್ರೀಲಲಿತಾ ದೇವಿಯ ಚಿತ್ರ ಗೋಚರಿಸಿದ್ದು ದಾಖಲಾಗಿದೆ. ಶ್ರೀಚಕ್ರದ ಮೇಲೆ ಇಟ್ಟ ದೃಷ್ಠಿ ನರಮಂಡಲದಲ್ಲಿ ಉಂಟಾಗುವ ಕಂಪನ eeg (ಎಲೆಕ್ಟ್ರೋ ಎನ್ ಕೆಫಲೊಗ್ರಾಫ್) ಅಲ್ಫಾ ಅಲೆ ಹೊರಡಿಸುತ್ತದೆ. ಶ್ರೀಚಕ್ರದ ಚವ್ಕಟ್ಟು ಜ್ಞಾನೇಂದ್ರಿಯಮಟ್ಟದ ಆಧುನಿಕ ನರಶಾಸ್ತ್ರ ವಿವರಣೆಗೆ ಹೋಲಿಕೆ ಇದೆ. ಬಲ ಮೆದುಳು, ದೃಷ್ಟಿ, ಶ್ರ  ವಣಶಕ್ತಿ ಚೇತಕವೆಂದು ನಂಬಿದ್ದ ಋಷಿಗಳು ಮಾನವ ದೇಹ ಕಾರ್ಯಶೀಲತೆಯ ವಿಸ್ತಾರ ಜ್ಞಾನ ಪಡೆದಿದ್ದುದರಲ್ಲಿ ಆಶ್ಚರ್ಯವಿಲ್ಲ. ಈಜಿಪ್ಟ್ನ ಪಿರಮಿಡ್ ರಚನಾ ಶಾಸ್ತ್ರಕ್ಕೂ ಶ್ರೀ ಚಕ್ರದ ರೇಖಗಣಿತ ರಹಸ್ಯದ ಕೊಡುಗೆ ಇದೆ ಎನ್ನುವ ಅಭಿಪ್ರಾಯವೂ ಇದೆ. ಶ್ರೀಚಕ್ರದ ರಹಸ್ಯ ಭೇದಿಸಲು ರಷ್ಯದ ಮನಃಶರೀರ ಶಾಸ್ತ್ರದ ವಿಜ್ಞಾನಿಗಳು ಮಾಸ್ಕೊ ವಿಶ್ವವಿದ್ಯಾಲಯದಲ್ಲಿ ಸಂಶೋಧನೆಯಲ್ಲಿ ನಿರತರಾಗಿದ್ದಾರೆ. ಇತ್ತೀಚಿನ ವರದಿಯೊಂದು ಶ್ರೀಚಕ್ರದ ಆರಾಧನೆ ಜೀವಕೋಶದಲ್ಲಿರುವ DNAಯನ್ನು ಕಾರ್ಯಚಟುವಟಿಕೆಯ ಪರಿಧಿಗೆ ಬರುವಂತೆ ಪ್ರಚೋದಿಸುತ್ತದೆ ಎಂದು ಹೇಳಿದೆ.

ಈ ಶ್ರೀಚಕ್ರವನ್ನು ಶಂಕರಾಚಾರ್ಯರು ಅಲ್ಲದೆ ರಾಮಾನುಜಾಚಾರ್ಯರು, ಮಧ್ವಾಚಾರ್ಯರೂ ಸಹ ಆರಾಧಿಸಿ ಆನಂದಿಸಿ  ಇದರ ಮಹಿಮೆಯನ್ನು ಲೋಕಕ್ಕೆ ಸಾರಿರುತ್ತಾರೆ.

ಇಂತಹ ಮಹೋನ್ನತ ಶಕ್ತಿಯನ್ನು ಹೊಂದಿರುವ ಶ್ರೀಚಕ್ರದ ಮಹಿಮೆಯನ್ನು ತಿಳಿದು ಆರಾಧಿಸುತ್ತಿದ್ದರು ನಮ್ಮ ಋಷಿ ಮುನಿಗಳು. ಈಗ ವೈಜ್ಞಾನಿಕವಾಗಿ ಹೇಳುತ್ತಿರುವ ಎಷ್ಟೋ ವಿಷಯಗಳು ನಮ್ಮ ಋಷಿ ಮುನಿಗಳಿಗೆ ಸಾವಿರಾರು ವರ್ಷಗಳ ಹಿಂದೆಯೇ ತಿಳಿದಿತ್ತು. ಅದನ್ನು ಸರಿಯಾಗಿ ಅರ್ಥಮಾಡಿಕೊಂಡು ಜೀವನಕ್ಕೆ ಅಳವಡಿಸಿಕೊಂಡರೆ ಇನ್ನೂ ಹೆಚ್ಚಿನ ಪ್ರಗತಿಯನ್ನು ಸಾಧಿಸಬಹುದೆನ್ನುವುದರಲ್ಲಿ ಸಂದೇಹವೇನೂ ಇಲ್ಲ.

ಕೃಪೆ : ವಸಂತ ಗಣೇಶ್ 
(ಕೃತಜ್ಞತಾ ಪೂರ್ವಕವಾಗಿ ಬಳಸಿಕೊಂಡಿದ್ದೇನೆ)

ಶ್ರೀ_ಚಕ್ರದ_ಉದಯ.

ಪಗಡೆಯಾಟ (ಮಗುವಿನ ಗೆಲುವು ತಾಯಿಗೆ ಸಂತೋಷ)
 ಆಟ ಪ್ರಾರಂಭವಾಯಿತು. 

ದೇವಸ್ಥಾನದ ಅರಿಸಿನ, ಕುಂಕುಮ, ಗಂಧದ ಪುಡಿಗಳನ್ನು ಉಪಯೋಗಿಸಿ ಪಗಡೆ ಆಟದ ನಕ್ಷೆಯನ್ನು ಶ್ರೀಗಳವರು ಬರೆದರು. 

ದೇವಿ ತನ್ನ ಶಕ್ತಿಯಿಂದ ದಿವ್ಯ ದಾಳಿಗಳನ್ನು ಸೃಷ್ಟಿಸಿದಳು! ಶಂಕರರು ಪೂಜೆಗಾಗಿ ದೇವಿಗೆ ಬಳಸಿದ್ದ ಹೂವುಗಳನ್ನು ಆಟದಲ್ಲಿ ತಮ್ಮ ನಡಿಗೆಯ ಕಾಯಿಗಳನ್ನಾಗಿಯೂ, ಅವಳ ಆಭರಣದ ಮುತ್ತು ರತ್ನಗಳನ್ನು ಬಳಸಿ ಅವಳ ನಡಿಗೆಯ ಕಾಯಿಗಳನ್ನಾಗಿಯೂ ಸಿದ್ಧಪಡಿಸಿದರು. 

ದೇವಿ ಆಟವಾಡಲೆಂದು ಗರ್ಭಗುಡಿಯ ಪೀಠದ ಮೇಲೆ ಕುಳಿತಳು. 

ಶ್ರೀಗಳವರು ಅವಳೆದುರು ಪದ್ಮಾಸನ ಹಾಕಿ ಗರ್ಭಗುಡಿಯ ಹೊಸ್ತಿಲ ಹೊರಗೆ ಕುಳಿತು ಆಟ ಪ್ರಾರಂಭಿಸಿದರು. 

ಹಾಗೆಯೇ ಪ್ರಶಸ್ತವಾದ ಆ ಕಾಲ ವ್ಯರ್ಥವಾಗದಂತೆ ಲಲಿತಾ ಸಹಸ್ರನಾಮದ ಬೇರೆ ಬೇರೆ ನಾಮಗಳನ್ನು ಜಪಿಸುತ್ತಾ ಆಟ ಮುಂದುವರೆಸಲು ದೇವಿಯ ಅಪ್ಪಣೆ ಬೇಡಿದರು. 

ಅಷ್ಟೇ ಅಲ್ಲ ದೇವಿ ತನಗೆ ಬೇಕಾದ ಗರ ಬೀಳುವಂತೆ ಹೊಂದಿದ್ದ ಶಕ್ತಿಯನ್ನು ತಮಗೂ ಅನುಗ್ರಹಿಸಿ ತಮಗೆ ಬೇಕಾದ ಗರ ಬೀಳಿಸಿಕೊಳ್ಳಲು ಸಹಾಯ ಮಾಡಬೇಕೆಂದು ಕೇಳಿಕೊಂಡರು. 

ದೇವಿ ಉದಾರತೆಯಿಂದ ಅನುಗ್ರಹಿಸಿದಳು. ಆಟ ಪ್ರಾರಂಭವಾಯಿತು. 

 ಮೊದಲು ದಾಳಿ ಉರುಳಿಸಿದವರು ಶ್ರೀಗಳೇ, ಬಿದ್ದ ಗರ ಒಂಬತ್ತು! ಅವರು 'ಶ್ರೀ ಚಕ್ರರಾಜ ನಿಲಯಾ' ಎಂದು ದೇವಿಯ ನಾಮ ಹೇಳಿ, ತಮ್ಮ ಕಾಯಿ ನಡೆಸುವ ಮುನ್ನ ಶ್ರೀಚಕ್ರ ನಿಲಯಳಾಗಿರುವ ದೇವಿಯ ಶ್ರೀಚಕ್ರಕ್ಕೆ ಒಂಬತ್ತು ಆವರಣಗಳಿರುವುದರನ್ನು ಹೇಳಿ ಅದರ ಸಂಕೇತವಾಗಿ ಒಂಬತ್ತು ಅವರಣಗಳ ಗೆರೆಗಳನ್ನು ಪಕ್ಕದಲ್ಲಿ ಬರೆದರು.

 ಆಟ ಮುಂದೆ ಸಾಗಿತು, ಹೀಗೆ ಒಂದೊಂದು ಗರ ಬಿದ್ದಾಗಲೂ ಅದಕ್ಕೆ ಸರಿಹೊಂದುವ ಅಕ್ಷರ ಸಂಖ್ಯೆಗಳಿದ್ದ ದೇವಿಯ ನಾಮಗಳನ್ನು ಹೇಳಿ ಆ ಸಂಖ್ಯೆಗೆ ಅನುಸಾರವಾಗಿ ಬೀಜಾಕ್ಷರಗಳನ್ನು ಬಳಸಿ ಗೆರೆಗಳಿಂದ ನಿರ್ಮಿತವಾದ ರೇಖಾಕೃತಿಗಳನ್ನು ರಚಿಸತೊಡಗಿದರು.

 ಹಾಗೆ ರಚಿಸಿದ ಶ್ರೀಚಕ್ರದ ರೇಖಾಕೃತಿಯಲ್ಲಿ ಹಿಂದಿನ ಶ್ರೀಚಕ್ರದಲ್ಲಿದ್ದ ಉಗ್ರ ಬೀಜಾಕ್ಷರಗಳನ್ನು ತೆಗೆದುಹಾಕಿ ಅವುಗಳ ಸ್ಥಾನದಲ್ಲಿ ಅದೇ ಸಂಖ್ಯೆಗೆ ಅನುಗುಣವಾಗಿ ಹೊಂದಿಕೊಳ್ಳಬಹುದಾದ ಸಾತ್ವಿಕ ಬೀಜಾಕ್ಷರಗಳನ್ನು ತುಂಬಿ ಸಮೀಕರಣ ಸರಿಹೊಂದಿಸಿದರು. 

ಅಕ್ಷರಗಳು ಬದಲಾದುದರಿಂದ ಮಂತ್ರವೇ ತಿರುವು ಮುರುವು ಆಗುವಂತೆ ಮಾಡಿ ತಾವು ಹೊಸದಾಗಿ ರಚಿಸಿದ ರೇಖಾ ವಿನ್ಯಾಸದಲ್ಲಿ ಬಿಂದು, ತ್ರಿಕೋಣ, ವಸುಕೋಣ ದಶಾರ ಯುಗ್ಮ ಮನ್ವಸ್ತ್ರ ನಾಗದಳ ಷೋಡಶಾ ಪತ್ರ ವೃತ್ತ ತ್ರಯ ಹಾಗೂ ಭೂಪುರಗಳನ್ನೊಳಗೊಂಡ ಮಂಗಳದಾಯಕ ಶ್ರೀಚಕ್ರವನ್ನು ಪ್ರತಿಷ್ಟಿಸಿದರು. 

ಈ ವೇಳೆಗೆ ಮೂರು ಯಾಮಗಳು ಕಳೆದುವೆಂದು (ಸೂಚಿಸುವ) ತಿಳಿಸುವ ನಗರದ ಬೆಳಗಿನ ಝಾವದ ಕಹಳೆ ಶಬ್ದವಾಯಿತು. ದೇವಿ ಥಟ್ಟನೆ ಎಚ್ಚೆತ್ತಳು. 

ಆಟದಲ್ಲಿ ತಾನು ಮಗ್ನಳಾಗಿ ತನ್ನ ನಿತ್ಯ ಅಭ್ಯಾಸವನ್ನು ಮರೆತು ಅಂದು ಸಂಹಾರ ಕ್ರಿಯೆ ನಡೆಸಲಿಲ್ಲವೆಂದು ಅವಳಿಗೆ ಖೇದವಾಯಿತು! ಈ ವೇಳೆಗಾಗಲೇ ಆಟವು ಅಂತ್ಯದ ಘಟ್ಟಕ್ಕೆ ತಲುಪಿತು.

 ಶಂಕರರು ಹಣ್ಣಿಗೆ ಬರುವ ದ್ವಾರದ ಬಳಿಯಲ್ಲಿ ತಮ್ಮ ಕೊನೆಯ ಕಾಯಿಗಳನ್ನು ತಂದು ನಿಲ್ಲಿಸಿದ್ದರು ಆದರೆ ದೇವಿ ತನ್ನ ಕಾಯಿಯನ್ನು ಹಣ್ಣಿನ ಮನೆಯ ಒಳಗೆ ತಂದಿದ್ದಳು. 

ಅಷ್ಟೇ ಅಲ್ಲ ಆಟದ ಕೊನೆ ಗರ ಹಾಕುವ ಸರದಿಯೂ ಅವಳದಾಗಿತ್ತು ಎರಡು ಸಂಖ್ಯೆಯ ಗರ ಹಕಿ 'ದುಗ' ಎಂದು ಹೇಳುತ್ತಾ ಕಾಯಿಯನ್ನು ಹಣ್ಣು ಮಾಡಿಯೇ ಬಿಟ್ಟಳು. 

 ಶ್ರೀಗಳವರು ಆಟದಲ್ಲಿ ಸೋತಿದ್ದರು! 

ಆದರೆ ಅವರು ತಮ್ಮ ಉದ್ದೇಶದಲ್ಲಿ ಗೆದ್ದಿದ್ದರು. ಪಂದ್ಯದ ನಿಯಮದಂತೆ ದೇವಿ ಅವರನ್ನು ಕಬಳಿಸಿ ಮರುದಿನದಿಂದ ತನ್ನ ಸಂಹಾರ ಕ್ರಿಯೆ ಮುಂದುವರೆಸಬಹುದಾಗಿತ್ತು! 

ಆದರೆ ಶಂಕರರ ಬುದ್ಧಿವಂತಿಕೆಯಿಂದ ಅವಳ ಆವಾಸಸ್ಥಾನವಾದ ಶ್ರೀಚಕ್ರದ ಬೀಜ ಮಂತ್ರಗಳೆಲ್ಲ ತಿರುವು ಮುರುವಾಗಿ, ಕ್ಷುದ್ರ ಸಿದ್ಧಿಗಾಗಿ ನೀಚ ಜನರು ಅವಳನ್ನು ಆಹ್ವಾನಿಸಿದರೆ, ಶ್ರೀಚಕ್ರ ಬಿಟ್ಟು ಹೋಗದಂತೆ ನಿಯೋಜಿಸಿದ ಶ್ರೀಚಕ್ರದ ಬಿಂದು ಸ್ಥಾನದಲ್ಲಿ ಅಕ್ಷರ ಸಂಖ್ಯಾಶಾಸ್ತ್ರದ ಮೇರೆಗೆ ಅವಳು ಬಂಧಿತಳಾಗಿದ್ದಳು! 

 ದೇವಿ ಪಂದ್ಯದ ನಿಯಮವನ್ನು ಶಂಕರರಿಗೆ ಜ್ಞಾಪಿಸಿ ತನ್ನ ಸಂಹಾರ ಕಾರ್ಯ ಮುಂದುವರೆಸುವೆನೆಂದಾಗ ಶಂಕರರು ತುಂಟು ನಗೆ ಬೀರಿರಬೇಕು! 

ಶ್ರೀಚಕ್ರದ ಬಿಂದು ಸ್ಥಾನದಲ್ಲಿ ಶಂಕರರಿಂದ ಬಂಧಿತಳಾಗಿದ್ದ ದೇವಿ ಮತ್ತೆ ಎಂದೂ ಉಗ್ರ ಬೀಜಾಕ್ಷರಗಳ ಮಂತ್ರಕ್ಕೆ ಮಣಿದು ಉಗ್ರರೂಪ ತಾಳಿ ಪೀಠ ಬಿಡುವಂತಿರಲಿಲ್ಲ ಮಗುವಿನ ಗೆಲುವು ತಾಯಿಗೆ ಸಂತೋಷ ತರುವಂತೆ ದೇವಿ ಶಂಕರರ ಮೇಲೆ ಪ್ರಸನ್ನಳಾಗಿ ತನ್ನ ಬಂಧನವನ್ನು ಸಂತೋಷದಿಂದ ಒಪ್ಪಿದಳು. 

 ಸಂಖ್ಯಾಶಾಸ್ತ್ರದಲ್ಲಿ ಸಂಖ್ಯೆಗಳಿಗೆ ಹಾಗೂ ಅಕ್ಷರಗಳಿಗೆ ವಿಶಿಷ್ಟ ಮಾನ್ಯತೆಯ ಸ್ಥಾನಗಳಿವೆ. 

ಒಂದರಿಂದ ಒಂಬತ್ತರವರೆಗಿನ ಸಂಖ್ಯೆಗಳನ್ನು ಶೂನ್ಯದೊಡನೆ ಸೇರಿಸಿ ಅಸಂಖ್ಯ ಸಂಖ್ಯೆಗಳನ್ನು ಪಡೆಯಬಹುದು. 

ಹಾಗೆಯೇ ವರ್ಣಮಾಲೆಯ 'ಆ' ನಿಂದ 'ಹ' ವರೆಗಿನ ಅಕ್ಷರಗಳನ್ನು ಬೇರೆ ಬೇರೆ ವಿಧದಲ್ಲಿ ಸ್ವರಗಳೊಡನೆ ಜೋಡಿಸುವುದರಿಂದ ಅಸಂಖ್ಯ ಮಂತ್ರ ಬೀಜಾಕ್ಷರಗಳ ನಿರ್ಮಾಣವಾಗುತ್ತವೆ. 

ಹೀಗೆ ನಿರ್ಮಾಣವಾಗುವ ಮಂತ್ರ ಸ್ತೋತ್ರ, ನಾಮಗಳ ಸಂಖ್ಯೆಯೂ ಬಹಳವಾಗಿದ್ದು ಅಕ್ಷರ ಮಾಲೆಯ ವರ್ಣ ಹಾಗೂ ಸಂಖ್ಯಾಶಾಸ್ತ್ರದ ಸಂಖ್ಯೆಗಳು ಒಂದಕ್ಕೊಂದು ಪೂರಕವಾಗಿರುತ್ತವೆ. 

ಒಂದ ಅಕ್ಷರ ಹೆಚ್ಚಾದರೂ, ಒಂದು ಅಕ್ಷರ ಲುಪ್ತವಾದರೂ ಕೊನೆಗೆ ಅಕ್ಷರದ ಅಲ್ಪಪ್ರಾಣ, ಮಹಾಪ್ರಾಣ ಅಥವಾ ಒತ್ತುಗಳಲ್ಲಿ ವ್ಯತ್ಯಾಸವಾದರೂ ಅರ್ಥ ಬದಲಾಯಿಸಿ ಮಂತ್ರಗಳ ಉದ್ದೇಶವೇ ಬದಲಾಗಿಬಿಡುತ್ತವೆ. 

ಕೆಲವೊಮ್ಮೆ ಅನರ್ಥವೂ ಆಗಿಬಿಡುತ್ತದೆ. ಶ್ರೀಚಕ್ರದಲ್ಲಿ ಅಲ್ಲಿಯವರೆಗೆ ಉಗ್ರ ಬೀಜಾಕ್ಷರಗಳ ಸ್ಥಾಪನೆಯಿಂದ ಇಂತಹುದೇ ಅನರ್ಥವಾಗಿತ್ತು. 

ಒಂದು ಅಕ್ಷರಕ್ಕೆ ಅಥವಾ ಕೆಲವು ಅಕ್ಷರಗಳಿಗೆ ಒಂದು ಸಂಖ್ಯೆಯೊಡನೆ ತಾದಾತ್ಮ್ಯಗೊಳಿಸಿದಾಗ, ಒಂದು ಸಂಖ್ಯೆ, ಒಂದು ಅಕ್ಷರಕ್ಕೆ ಇಲ್ಲವೇ ಅನೇಕ ಅಕ್ಷರಗಳ ಸಂಕೇತವಾಗುತ್ತದೆ. 

ಹೀಗೆ ವರ್ಣಮಾಲೆಯ 'ಅ' ನಿಂದ 'ಅಂ' ವರೆಗೆ 'ಕ' ನಿಂದ 'ಕ್ಷ' ವರೆಗೆ ಕೆಲವು ಸಂಖ್ಯೆಗಳನ್ನು ಸಂಕೇತ ಮಾಡಿ ನೆನಪಿನಲ್ಲಿಟ್ಟುಕೊಂಡರೆ ಮಂತ್ರಕ್ಕೂ ಸಂಖ್ಯೆಗೂ ಅದ್ಭುತ ಹೊಂದಾಣಿಕೆಯಾಗುತ್ತದೆ. ಅದರ ಪರಿಣಾಮವಾಗಿ ಸಂಕಲ್ಪ ಉದ್ದೇಶಗಳೂ ಬದಲಾಗುತ್ತದೆ. 

 ಆಟದ ನಡುವೆ ಸ್ತೋತ್ರ ಮಂತ್ರವನ್ನು ಬಾಯಿಯಲ್ಲಿ ಹೇಳುತ್ತಿದ್ದ ಶಂಕರರು ತಮಗೆ ಬಿದ್ದ ಗರಗಳ ಸಂಖ್ಯೆಗೆ ಹೊಂದಿಸಿ ಶ್ರೀಚಕ್ರದ ಬಿಂದು ತ್ರಿಕೋಣ, ಅಷ್ಟಕೋಣ, ಅಂತರ್ದಶಾರ, ಬಹಿರ್ದಶಾರ, ಚತುರಸ್ತರ, ಇತ್ಯಾದಿ ರೇಖಾಕೃತಿಗಳನ್ನು ನಿರ್ಮಿಸಿ ಅದರಲ್ಲಿ ತಮ್ಮ ಉದ್ದೇಶಪೂರಕವಾದ ಮಂತ್ರಾಕ್ಷರಗಳನ್ನು ತುಂಬಿದ್ದರು! 

 ಸಂಖ್ಯಾಶಾಸ್ತ್ರದ ಸಂಕೇತ ನಿಯಮವನ್ನು ಅನುಸರಿಸಿ ಅಲ್ಲಿಯವರೆಗೆ ಕ್ಷುದ್ರ ಸಾಧಕರು ತಮ್ಮ ಸ್ವಾರ್ಥ ಸಿದ್ಧಿಗಾಗಿ ಶ್ರೀಚಕ್ರದಲ್ಲಿ ಉಗ್ರ ಬೀಜಾಕ್ಷರಗಳನ್ನು ತುಂಬಿ ದೇವಿಯ ಶಕ್ತಿಯನ್ನು ದುರುಪಯೋಗಪಡಿಸಿಕೊಂಡು ತಾಮಸೀ ಗುಣವಾಗಿ ಪರಿವರ್ತಿಸಿ ಅವಳು ಉಗ್ರರೂಪ ತಾಳಿ ಬಲಿ ತೆಗೆದುಕೊಳ್ಳುವಂತೆ ಅವಳನ್ನು ಅಗ್ರಹಿಸುತ್ತಿದ್ದರು.

 ಅಂತಹ ನೀಚರು ಶ್ರೀಚಕ್ರದಲ್ಲಿ ಅಳವಡಿಸಿದ್ದ ಉಗ್ರ ಬೀಜಾಕ್ಷರಗಳನ್ನು ಒಂದೊಂದಾಗಿ ಅಳಿಸಿಹಾಕುತ್ತಾ ಅವುಗಳ ಸ್ಥಳದಲ್ಲಿ ತಮಗೆ ಬಿದ್ದ ಗರದ ಸಂಖ್ಯೆಯನ್ನು ತಾವು ಬಾಯಿಯಲ್ಲಿ ನುಡಿಯುತ್ತಲೇ, ಮಂತ್ರಾಕ್ಷರಗಳ ಸಂಖ್ಯೆಗೆ ಅದನ್ನು ಹೊಂದಿಸಿ ಅವುಗಳನ್ನು ಸಾತ್ವಿಕ ಬೀಜಾಕ್ಷರಗಳನ್ನಾಗಿ ಪರಿವರ್ತಿಸಿ ಹಿಂದಿನ ಉಗ್ರ ಬೀಜಾಕ್ಷರಗಳ ಸಂಖ್ಯೆಗೆ ಬದಲಾಗಿ ತಾವು ಸೇರಿಸುವ ಸಾತ್ವಿಕ ಬೀಜಾಕ್ಷರಗಳ ಸಂಖ್ಯೆ ಸರಿಹೊಂದುವಂತೆ ಸಮೀಕರಣ ಮಾಡಿ, ಹೊಸ ಬೀಜಾಕ್ಷರಗಳನ್ನು ಶ್ರೀಚಕ್ರದಲ್ಲಿ ಅಳವಡಿಸಿಬಿಟ್ಟಿದ್ದರು! 

ಆಟದಲ್ಲಿ ಮಗ್ನಳಾಗಿದ್ದ ದೇವಿ ಇದನ್ನು ಗಮನಿಸಿರಲಿಲ್ಲ ಈಗ ಅವಳಿಗೆ ತಾಮಸೀ ಬೀಜಾಕ್ಷರಗಳ ಪ್ರಭಾವದಿಂದ ಉಗ್ರರೂಪ ತಾಳುವುದು ಸಾಧ್ಯವೇ ಇರಲಿಲ್ಲ! ಏಕೆಂದರೆ ಹಾಗಾಗದಂತೆ ಶ್ರೀ ಶಂಕರರು ಸಾತ್ವಿಕ ಬೀಜಾಕ್ಷರಗಳಿಂದ ಕೂಡಿ ಹೊಸದಾಗಿ ತಾವು ನಿರ್ಮಿಸಿದ್ದ ಶ್ರೀಚಕ್ರದ ಬಿಂದು ಸ್ಥಾನದಲ್ಲಿ ಅವಳನ್ನು ಸ್ತಿರವಾಗಿ ನಿಲ್ಲಿಸಿಬಿಟ್ಟಿದ್ದರು. 

(ತಾಮಸೀ ಆಹಾರಕ್ಕೆ ಒಗ್ಗಿದ ಮನುಷ್ಯನ ಪ್ರವೃತ್ತಿ ತಾಮಸಿಕವಾಗಿರುವಾಗ ಅವನಿಗೆ ಸಾತ್ವಿಕ ಆಹಾರವಿತ್ತು ಪರಿವರ್ತಿಸುವಂತೆ ಶ್ರೀ ಶಂಕರರು ದೇವಿಯ ತಾಮಸಿಕ ಉಗ್ರರೂಪವನ್ನು ನಿಗ್ರಹಗೊಳಿಸಿದ್ದರು. 

ಹೊಸದಾಗಿ ಅವರಿಂದ ಪರಿಷ್ಕರಿಸಲ್ಪಟ್ಟ ಶ್ರೀಚಕ್ರ ಈಗ ಎಲ್ಲ ಸಾಮಾನ್ಯ ಜನರಿಗೆ, ಸಾತ್ವಿಕರಿಗೆ, ಗೃಹಸ್ಥರಿಗೆ ಎಲ್ಲರಿಗೂ ಶುಭವನ್ನು ತರುವ ಮಂಗಳ ಯಂತ್ರವಾಗಿ ಹೋಗಿತ್ತು! ಹೀಗೆ ಸರ್ವ ಮಂಗಳೆಯಾದ ದೇವಿ ಆಟದ ನಿಯಮವನ್ನು ಪಾಲಿಸಿ ಶಂಕರರನ್ನು ಬಲಿ ತೆಗೆದುಕೊಳ್ಳುವುದು ಸಾಧ್ಯವೇ ಇರಲಿಲ್ಲ! 

ಅವಳು ಬಾಲಕ ಶಂಕರರ ತೀಕ್ಷ್ಣ ಬುದ್ದಿಗೆ ಹಾಗೂ ಅವರ ಸದುದ್ದೇಶಕ್ಕೆ ಮಣಿದಳು. ಅವರಿಬ್ಬರೂ ಸೇರಿಯೇ ಸುಂದರೇಶನನ್ನು ಪ್ರಾರ್ಥಿಸಿದರು. 

ಆಗ ಸುಂದರೇಶನು ಅಂದರೆ ಶಿವನು ಪ್ರತ್ಯಕ್ಷನಾಗಿ ಆದಿಶಂಕರರು ತನ್ನ ಅಂಶದಿಂದ ಜನಿಸಿದವರೆಂದು ಹೇಳಿ ಅವನನ್ನು ಹರಸಿ, ದೇವಿಗೆ ಆ ಬಾಲಕನಿಂದ ಮಾನವ ಕುಲಕ್ಕೆ ಆದ ಉಪಕಾರವನ್ನು ವಿವರಿಸಿದ. 

 ಇದೆಲ್ಲಾ ನಡೆಯುತ್ತಿದ್ದಂತೆಯೇ ಅರಮನೆಯಲ್ಲಿ ಇಡೀ ರಾತ್ರಿ ನಿದ್ರೆಯಿಲ್ಲದೆ ಬಾಲ ಸನ್ಯಾಸಿ ಎಲ್ಲ ದೇವಿಯ ಉಗ್ರರೂಪಕ್ಕೆ ಬಲಿಯಾಗಿ ಆತನ ಹತ್ಯೆಯ ಪಾಪ ತನಗೆ ಸುತ್ತಿಕೊಳ್ಳುವುದೋ ಎಂದು ತಳಮಳಕ್ಕೊಳಗಾಗಿದ್ದ ಪಾಂಡ್ಯರಾಜ ಬೆಳಗಾಗುವ ವೇಳೆಗೆ ಒಂದು ನಿರ್ಧಾರಕ್ಕೆ ಬಂದಿದ್ದ. 

ತನ್ನ ವಂಶದ ಪೂರ್ವಜರ ಗರ್ಭದಲ್ಲಿ ಜನಿಸಿ ಪಾಂಡ್ಯರಾಜತನಯೆ ಎಂದು ಪ್ರಖ್ಯಾತಳಾಗಿದ್ದು ಈಗ ತನಗೆ ಕುಲದೇವತೆಯಾಗಿದ್ದ ಮೀನಕ್ಷಿಗೆ ಬಾಲ ಸನ್ಯಾಸಿಯ ಸಾವಿಗೆ ಕಾರಣನಾದ ತನ್ನನ್ನೇ ತಾನು ಬಲಿಯಾಗಿ ಅರ್ಪಿಸಿಕೊಂಡು ಇನ್ನು ಮುಂದಾದರೂ ದೇವಿ ತನ್ನ ಕ್ರೂರ ಬೇಟಿಯನ್ನು ನಿಲ್ಲಿಸಬೇಕೆಂದು ಅವಳಲ್ಲಿ ಪ್ರಾರ್ಥಿಸಿಕೊಳ್ಳುವುದು!! 

 ಅಂತೆಯೇ ಅವನು ಉದಯವಾಯಿತೆಂದು ಸೂಚಿಸುವ ಮಂಗಳ ವಾದ್ಯಗಳು ಭೂಪಾಲ ರಾಗದಲ್ಲಿ ಮೊಳಗತೊಡಗಿದೊಡನೆಯೇ ಕೈಯ್ಯಲ್ಲಿ ಕತ್ತಿ ಹಿಡಿದು ತನ್ನ ಭೂಪಾಲ ರಾಗದಲ್ಲಿ ಮೊಳಗತೊಡಗಿದೊಡನೆಯೇ ಕೈಯ್ಯಲ್ಲಿ ಕತ್ತಿ ಹಿಡಿದು ತನ್ನ ಪರಿವಾರದೊಡನೆ ಮೀನಾಕ್ಷಿ ದೇವಾಲಯಕ್ಕೆ ಬಂದ ಅಲ್ಲಿ ಅವನು ಕಂಡದ್ದೇನು? 

 ಕಣ್ಣು ಮುಚ್ಚಿ ತನ್ಮಯರಾಗಿ ಭಕ್ತಿಯಿಂದ ಸ್ತೋತ್ರಗೈಯ್ಯತ್ತಿದ್ದ ಶಂಕರ ಹಾಗೂ ಅವನ ಎದುರಿಗೆ ಹಸನ್ಮುಖರಾಗಿ ಅವನನ್ನು ಹರಸುತ್ತಾ ನಿಂತಿದದ ಶಿವ ಶಿವೆಯರು ಜೊತೆಗೆ ಅವರಿಗೆ ಸ್ವಲ್ಪ ದೂರದಲ್ಲಿ ಹಿಂದಿನ ರಾತ್ರಿಯ ಮೂರು ಯಾಮಗಳಲ್ಲಿ ಶ್ರೀ ಶಂಕರರಿಂದ ರಚಿತವಾಗಿದ್ದು ಬಾಲ ಸೂರ್ಯನಂತೆ ಪ್ರಕಾಶಿಸುತ್ತಿದ್ದ ಶ್ರೀಚಕ್ರ ರೇಖಾಕೃತಿ! 

 ನಡೆದ ವಿಷಯವೆಲ್ಲಾ ತಿಳಿದಾಗ ಪಾಂಡ್ಯರಾಜನು ಸಂತೋಷ, ಉದ್ವೇಗ, ಶ್ರದ್ಧೆ ಭಕ್ತಿಗಳ ಮಿಶ್ರಭಾವದಿಂದ ಸಂದರೇಶ, ಮೀನಾಕ್ಷಿ ಹಾಗೂ ಸನ್ಯಾಸಿ ಶಂಕರರಿಗೆ ದೀರ್ಘದಂಡ ಪ್ರಣಾಮ ಮಾಡಿದ! 

 ಕೊನೆಗೆ ಆದದ್ದೆಲ್ಲಾ ಒಳಿತಕ್ಕೆ ಎನ್ನುವಂತೆ ಎಲ್ಲರ ಮನಸ್ಸಿಗೂ ನೆಮ್ಮದಿ ಶಾಂತಿ ದೊರೆತುದಲ್ಲದೆ ಎಲ್ಲ ಆಸ್ತಿಕ ವರ್ಗಕ್ಕೆ ತ್ರಿಕಾಲದಲ್ಲೂ ಶಂಕರರು ದೇವಿಯ ಕೃಪೆಗೆ ಪಾತ್ರರಾಗುವ ಶ್ರೀಚಕ್ರದಂತಹ ಅದ್ಭುತ ಯಂತ್ರ ಸಾಧನವನ್ನು ಕೊಡುಗೆಯಾಗಿ ನೀಡಿದ್ದರು! 

 ಈ ಕತೆಯಲ್ಲಿ ಉತ್ಪ್ರೇಕ್ಷೆಗಳು ಇರಬಹುದಾದರೂ ಪ್ರಸ್ತುತದಲ್ಲಿ ಪ್ರಚಲಿತವಿರುವ ಶ್ರೀಚಕ್ರ ಶ್ರೀ ಶಂಕರಾಚಾರ್ಯರಿಂದ ಪರಿಷ್ಕರಿಸಲ್ಪಟ್ಟುದೆಂದು ಹೇಳಲಾಗುತ್ತದೆ. 

ಇದರಲ್ಲಿ ಬಿಂದು, ತ್ರಿಕೋಣ, ಅಷ್ಟಕೋಣ, ದಶಾರ ಯುಗ್ಮ, ಚತುರ್ದಶಾರ, ನಾಗದಳ, ಷೋಡಶದಳ, ವೃತ್ತ ತ್ರಯವೂ ಭೂಪುರಗಳಿಂದ ಕೂಡಿದ ನವಾವರಣದ ಶ್ರೀ ಚಕ್ರವು ಇಹ ಪರಗಳಿಗೆ ಸಾಧನವೆನ್ನಿಸಿ ಇದೀಗ ಗೃಹಸ್ಥರಿಗೆ ಮತ್ತು ಸಾಧಕರಿಗೆ ಅತ್ಯಂತ ಆಪ್ಯಾಯಮಾನವಾದ ಉಪಾಸನಾ ಸಾಧನವಾಗಿದೆ! 

 ಹೀಗೆ ಶ್ರೀ ಶಂಕರಾಚಾರ್ಯರಿಂದ ಪರಿಷ್ಕರಿಸಲ್ಪಟ್ಟ ಶ್ರೀಚಕ್ರವು ಇತರ ಎಲ್ಲಾ ದೇವಿ ದೇವತಾ ಶಕ್ತಿಗಳ ಚಕ್ರಗಳಿಗೂ ಮಾತೃ ಬೇರಿನಂತಿದೆ. ಹಾಗಾಗಿ ಯಾವುದೇ ದೇವತೆಯ ಉಪಾಸನೆಯನ್ನು ಶ್ರೀಚಕ್ರದ ಮೂಲಕವೇ ಮಾಡಬಹುದಾಗಿದೆ. 

 ಶ್ರೀ ಶಂಕರಾಚಾರ್ಯರು ಇತರ ದೇವೀ ಕ್ಷೇತ್ರದ ಶಕ್ತಿ ಪೀಠಗಳನ್ನು ಸಂದರ್ಶಿಸಿ ಅಲ್ಲಿಯೂ ಆಯಾ ದೇವತಾ ಚಕ್ರದಲ್ಲಿದದ ಉಗ್ರ ಬೀಜಾಕ್ಷರಗಳನ್ನು ತೆಗೆದುಹಾಕಿ ಸತ್ವಪ್ರಧಾನವಾದ ಬೀಜಾಕ್ಷರಗಳನ್ನು ಅದರಲ್ಲಿ ಶಾಸ್ತ್ರಬದ್ದವಾಗಿ ಅಳವಡಿಸಿ ದೇವಿ ಚಕ್ರವನ್ನು ಎಲ್ಲ ವರ್ಗದ ಜನರಿಗೂ ಲಭಿಸುವಂತೆ ಉಪಾಸನಾ ಸಾಧನವಾಗಿ ಮಾಡಿದ್ದಾರೆ. 

 ಧುಮ್ಮಿಕ್ಕಿ ಭೋರ್ಗರೆದು ತನ್ನ ವೇಗ ಶಕ್ತಿಗೆ ಅಡ್ಡವಾಗಿ ತನ್ನೆದುರಿಗೆ ಬಂದ ಯಾವ ಜೀವಿಯನ್ನೂ ಬಿಡದೆ ಉಗ್ರವಾಗಿ ಆಪೋಶನ ತೆಗೆದುಕೊಳ್ಳುವ ಪ್ರವಾಹಕ್ಕೆ ಕಟ್ಟೆ ಹಾಕಿ ಅದರ ಪ್ರವಾಹದ ದಿಕ್ಕನ್ನು ಬದಲಿಸಿ ಒಳ್ಳೆಯ ಕಾರ್ಯಕ್ಕೆ ಅದು ಸಹಕಾರಿಯಾಗುವಂತೆ ಮಾಡಬಹುದು

 ತಾನೇ ಶ್ರೀ ಶಂಕರಾಚಾರ್ಯರು ಮಾಡಿದುದೂ ಅದನ್ನೇ! ಕ್ಷುದ್ರ ಸಾಧಕರಿಂದ ಅದುವರೆವಿಗೂ ಸ್ಥಾಪಿತವಾಗಿದ್ದ ಉಗ್ರ ಬೀಜಗಳಿಂದ ಆವಾಹಿತಳಾದ ದೇವಿ ಉಗ್ರ ಸ್ವರೂಪ ತಾಳಿ ಮದಘೂರ್ಣಿತ ರಕ್ಷಾಕ್ಷಿಯಾಗಿ ಪಾಂಡ್ಯರಾಜನ ಪ್ರಜೆಗಳನ್ನು ಬಲಿ ತೆಗೆದುಕೊಳ್ಳುತ್ತಿದ್ದಳು. 

ಆದರೆ ಶ್ರೀ ಶಂಕರಾಚಾರ್ಯರು ಯುಕ್ತಿಯಿಂದ ಆ ಉಗ್ರ ಬೀಜಾಕ್ಷರಗಳನ್ನು ಬದಲಿಸಿ ಅವುಗಳ ಸ್ಥಾನದಲ್ಲಿ ಸಾತ್ವಿಕ ಬೀಜಾಕ್ಷರಗಳನ್ನು ಜೋಡಿಸಿ ದೇವಿಯನ್ನು ಬಿಂದು ಸ್ಥಾನದಲ್ಲಿ ನಿಲ್ಲಿಸಿ ಅವಳು ಉಗ್ರಶಕ್ತಿಗಳಿಗೆ ಮಣಿಯುವ ಬದಲಾಗಿ ಬಿಂದು ತರ್ಪಣ ಸಂತುಷ್ಟಳಾಗಿ, ಶ್ರದ್ಧೆಗಳಿಂದ ಆರಾಧಿಸುವವರ ಮನೋಕಾಮನೆಗಳನ್ನು ಕರುಣಿಸುವ ಕಾಮಧೇನು, 

ಕಲ್ಪವೃಕ್ಷವಾಗಿ ತನ್ನ ಮಂದಹಾಸದಿಮದ ಪತಿಯನ್ನು ಮುದಗೊಳಿಸುವ 'ಮಂದಸ್ಮಿತ ಪ್ರಭಾಪೂರ'ದಿಂದ ಕೂಡಿ ಶ್ರೀಚಕ್ರದಲ್ಲಿ ನೆಲೆಯಾಗುವಂತೆ ಮಾಡಿದ್ದರು.

 🌻 ಶ್ರೀಚಕ್ರ 🌻

🏵️ ಶ್ರೀಚಕ್ರ ಅತ್ಯಂತ ಮಹಿಮಾನ್ವಿತ ಚಕ್ರ. ಅನಂತ, ಅದ್ಭುತ ಸೃಷ್ಟಿಯ ದೈವೀ ತಂತ್ರದ ಚೌಕಟ್ಟು ಸೃಷ್ಟಿಯ ಜನನಿ ಶ್ರೀ ಲಲಿತೆಯ ಮೂರ್ತ ರೂಪದ ರೇಖಾಯಂತ್ರ. 

🏵️ಆದಿ ಶಂಕರಾಚಾರ್ಯರು ಉಗ್ರಶಕ್ತಿ ಸೋಪಾನವಾಗಿದ್ದ ಶ್ರೀಚಕ್ರವನ್ನು ಪರಿಷ್ಕರಿಸಿ ಮಂಗಳಕರ ಶಕ್ತಿದೇವಿಯ ಸಾತ್ವಿಕ ರೂಪವು ಉಗಮಿಸುವಂತೆ ಮಾಡಿದರು.

🏵️ಕ್ರಮಬದ್ಧವಾಗಿ ರಚಿಸಿದ ಶ್ರೀಚಕ್ರದ ಮೇಲೆ ಲೇಸರ್ ಕಿರಣಗಳನ್ನು ಹಾಯಿಸಿದಾಗ ಶ್ರೀಲಲಿತಾ ದೇವಿಯ ಚಿತ್ರ ಗೋಚರಿಸಿದ್ದು ದಾಖಲಾಗಿದೆ.

🏵️ಜೊತೆಗೆ ಶಬ್ಧವನ್ನು ದೃಶ್ಯರೂಪವಾಘಿ ಪರಿವರ್ತಿಸುವ ವಿಜ್ಞಾನ ಶಬ್ಧ ಹಾಗೂ ಕಂಪನಗಳ ಪ್ರಭಾವದ ಅರಿವು ಮೂಡಿಸುತ್ತಿದೆ, ಶ್ರೀಚಕ್ರದ ಮೇಲೆ ಇಟ್ಟ ದೃಷ್ಟಿ ನರಮಂಡಲದಲ್ಲಿ ಉಂಟಾಗುವ ಕಂಪನ ಇಇಜಿಯಲ್ಲಿ (ಎಲೆಕ್ಟ್ರೋ ಎನ್ ಕೆಫಲೋಗ್ರಾಫ್) ಆಲ್ಫಾ ಅಲೆ ಹೊರಡಿಸುತ್ತದೆ.

🏵️ಧ್ಯಾನ ಸ್ಥಿತಿಯಲ್ಲೂ ಈ ಅಲೆ ನಿಧಾನಗತಿಯಲ್ಲಿ ಹೊರಹೊಮ್ಮುತ್ತದೆ, ಯಾವುದೇ ಇತರ ಚಕ್ರ ವೀಕ್ಷಿಸಿದಾಗ ಇಇಜಿ ಅಲೆಗಳಲ್ಲಿ ಬದಲಾವಣೆ ಕಂಡುಬರುವುದಿಲ್ಲ, 

🏵️ಶಕ್ತಿಯುತ ಅಣು ಕ್ಷಣಗಳಿಂದಾದ ಅಲೆ ವಿದ್ಯುತ್ ಅಯಸ್ಕಾಂತ ಬಲಕಾರಕ ಶಕ್ತಿ ಸಮಾಗಮಕ್ಕೆ ನಾಂದಿ, ಶ್ರೀಚಕ್ರದ ಮೂಲಕ ದಿವ್ಯ ಮಂತ್ರೋಚ್ಚಾರಗಳಿಂದಾದ ಶಬ್ಧ ಬ್ರಹ್ಮ ಶಕ್ತಿ ಇದನ್ನು ಸಾಧಿಸುತ್ತದೆಂದು ಭಾವಿಸಬಹುದು, ಒಂದು ದೃಷ್ಟಿಯಲ್ಲಿ ಆದಿ ಶಂಕರಾಚಾರ್ಯರನ್ನು ಕಣ ಭೌತ ಶಾಸ್ತ್ರದ ಪಿತಾಮಹ ಎನ್ನಬಹುದು.

🏵️ಬೀಜಾಕ್ಷರಗಳ ಅಳವಡಿಕೆಯಿಂದ ಶ್ರೀಚಕ್ರದ ಪರಾಶಕ್ತಿಯ ಚಟುವಟಿಕೆಯನ್ನೇ ನಿಗ್ರಹಿಸಿದರು, ಶ್ರೀ ಸೌಂದರ್ಯ ಲಹರಿಯ ಕಮಲ ಶಕ್ತಿ ತುಂಬಿಸಿ ಕಣ ಭೌತ ಶಾಸ್ತ್ರಕ್ಕೆ ಸವಾಲು ನೀಡಿದ್ದಾರೆ, ಆಧುನಿಕ ವಿಜ್ಞಾನದ ದೇವಕಣ (god particle)ದ ಮೂಲ ಶ್ರೀ ಚಕ್ರದಲ್ಲೋ ಸೌಂದರ್ಯ ಲಹರಿಯ ಕಮಲದಲ್ಲೋ ಇರಬಹುದೇನೋ ಎನ್ನುವ ಗ್ರಹಿಕೆಗೆ ಇಂಬು ಕೊಟ್ಟಿದ್ದಾರೆ.
 
🏵️ಶ್ರೀಚಕ್ರ ನರ ಚಟುವಟಿಕೆಯ ವೈಜ್ಞಾನಿಕ ವಿವರಣೆಗೂ ಪ್ರೇರಕ ಸೂತ್ರ, ಈ ಚಕ್ರದ ಚೌಕಟ್ಟು ಜ್ಞಾನೇಂದ್ರಿಯ ಮಟ್ಟದ ಆಧುನಿಕ ನರಶಾಸ್ತ್ರ ವಿವರಣೆಗೆ ಹೋಲಿಕೆ ಇದೆ, ಬಲ ಮಿದುಳು, ದೃಷ್ಟಿ, ಶ್ರವಣಶಕ್ತಿ ಚೇತಕವೆಂದು ನಂಬಿದ್ದ ಋಷಿಗಳು ಮಾನವ ದೇಹ ಕಾರ್ಯಶೀಲತೆಯ ವಿಸ್ತಾರ ಜ್ಞಾನ ಪಡೆದಿದ್ದುದರಲ್ಲಿ ಆಶ್ಚರ್ಯವಿಲ್ಲ.

🏵️ಜೊತೆಗೆ ಅವರು ಅದ್ವಿತೀಯ ಮನೋಗೋಚರ ಶಕ್ತಿ ಹೊಂಡಿದ್ದರು, ಈಜಿಪ್ಟ್ ದೇಶದ ಪಿರಮಿಡ್ ರಚನಾ ಶಾಸ್ತ್ರಕ್ಕೂ ಶ್ರೀಚಕ್ರದ ರೇಖಾಗಣಿತ ರಹಸ್ಯದ ಕೊಡುಗೆ ಇದೆ ಎನ್ನುವ ಅಭಿಪ್ರಾಯವೂ ಇದೆ, ಶ್ರೀಚಕ್ರದ ರಹಸ್ಯ ಭೇದಿಸಲು ರಷ್ಯಾದ ಮನಃಶರೀರಶಾಸ್ತ್ರದ ವಿಜ್ಞಾನಿಗಳು ಮಾಸ್ಕೋ ವಿಶ್ವವಿದ್ಯಾಲಯದಲ್ಲಿ ಸಂಶೋಧನೆಯಲ್ಲಿ ನಿರತರಾಗಿದ್ದಾರೆ.

🏵️ಭಾರತದಲ್ಲಿ ವೇದಶಾಸ್ತ್ರ ವಿಜ್ಞಾನ ಹಾಗೂ ವೈದ್ಯವಿಜ್ಞಾನದ ಸಂಶೋಧನೆಗಳು ಸಂಯೋಜಿತ ರೀತಿಯಲ್ಲಿ ಸಾಗಬೇಕಾಗಿದೆ, ಇತ್ತೀಚಿನ ವರದಿಯೊಂದು ಶ್ರೀಚಕ್ರದ ಆರಾಧನೆ ಜೀವಕೋಶದಲ್ಲಿರುವ ಡಿ.ಎನ್.ಎಯನ್ನು ಕಾರ್ಯಚಟುವಟಿಕೆಯ ಪರಿಧಿಗೆ ಬರುವಂತೆ ಪ್ರಚೋದಿಸುತ್ತದೆ ಎಂದು ಹೇಳಿದೆ.

ಶ್ರೀ ಕೃಷ್ಣಾರ್ಪಣಮಸ್ತು
ಶ್ರೀ ಶಿವಾರ್ಪಣಮಸ್ತು 
ಸದ್ವಿಚಾರ ಸಂಗ್ರಹ
***


No comments:

Post a Comment