SEARCH HERE

Friday 1 October 2021

ಕಾಲುಂಗುರ ಮಹತ್ವ ಮತ್ತು ಲಾಭ

 ಕಾಲುಂಗುರ - ಮಹತ್ವ ಮತ್ತು ಲಾಭ 


ವಿವಾಹಿತ ಸ್ತ್ರೀಯರು ಕಾಲ್ಬೆರಳುಗಳಲ್ಲಿ ಕಾಲುಂಗುರಗಳನ್ನು ಧರಿಸುತ್ತಾರೆ. 


ಕಾಲುಂಗುರಗಳನ್ನು ಹೆಬ್ಬೆರಳಿನ ಹತ್ತಿರದ ಬೆರಳಿನಲ್ಲಿ ಧರಿಸುತ್ತಾರೆ. 


ಮಹತ್ವ ಮತ್ತು ಲಾಭ ೧. ಕಾಲುಂಗುರಗಳಿಂದ ಸ್ತ್ರೀಯರಿಗೆ ಸತತವಾಗಿ ಸ್ತ್ರೀಧರ್ಮದ ಅರಿವಾಗುತ್ತದೆ: 


ಕಾಲುಂಗುರಗಳಿಂದ ಸ್ತ್ರೀಯರಿಗೆ ಸತತವಾಗಿ ತಮ್ಮ ಸ್ತ್ರೀಧರ್ಮ, ಕರ್ತವ್ಯ ಮತ್ತು ನಿಯಮಗಳ ಅರಿವಾಗುತ್ತದೆ. 


ಇದರಿಂದ ಸ್ತ್ರೀಯರು ಸ್ವೇಚ್ಛಾಚಾರಿಗಳಾಗದೇ ಬಂಧನದಲ್ಲಿರುತ್ತಾರೆ ಮತ್ತು ಧರ್ಮ ಪಾಲನೆ ಮಾಡುತ್ತಾರೆ. 


೨. ಕಾಲುಂಗುರಗಳಿಂದ ಸ್ತ್ರೀಯರ ಪ್ರಾಣದೇಹದ ಶುದ್ಧಿಯಾಗುತ್ತದೆ: 


ಕಾಲುಂಗುರಗಳ ಗೋಲಾಕಾರದಲ್ಲಿ ಬ್ರಹ್ಮಾಂಡದಿಂದ ಬರುವ ಇಚ್ಛಾಲಹರಿಗಳನ್ನು ಗ್ರಹಿಸುವ ಮತ್ತು ಸಂಗ್ರಹಿಸಿಡುವ ಕ್ಷಮತೆಯಿರುವುದರಿಂದ ಇಚ್ಛಾಶಕ್ತಿಯ ಲಹರಿಗಳ ಸ್ಪರ್ಶದಿಂದ ಸ್ತ್ರೀಯರ ಪ್ರಾಣ ದೇಹದ ಶುದ್ಧಿಯಾಗಲು ಸಹಾಯವಾಗುತ್ತದೆ. 


೩. ಕಾಲುಂಗುರಗಳ ಮಾಧ್ಯಮದಿಂದ ಕೆಟ್ಟ ಶಕ್ತಿಗಳ ನಿರ್ಮೂಲನೆಯಾಗುತ್ತದೆ: ಹೆಬ್ಬೆರಳಿನ ಸಮೀಪದ ಬೆರಳು ವಾಯುತತ್ತ್ವವನ್ನು ಪ್ರಕ್ಷೇಪಿಸುವಲ್ಲಿ ಅಗ್ರೇಸರವಾಗಿರುವುದರಿಂದ ಸ್ತ್ರೀಯರಲ್ಲಿನ ಜಾಗೃತ ಶಕ್ತಿತತ್ತ್ವವು ಅವಶ್ಯಕತೆಗನುಸಾರ ವಾಯುತತ್ತ್ವದ ಆಧಾರದಲ್ಲಿ ಕಾಲುಂಗುರಗಳ ಮಾಧ್ಯಮದಿಂದ ಕೆಟ್ಟ ಶಕ್ತಿಗಳ ನಿರ್ಮೂಲನೆಯ ಕಾರ್ಯವನ್ನು ಮಾಡುತ್ತದೆ. 


ಇದರಿಂದ ವಾಯುಮಂಡಲದಲ್ಲಿನ ಕೆಟ್ಟ ಶಕ್ತಿಗಳು ಸ್ತ್ರೀಯರ ಕಾಲುಗಳಿಂದ ಅವರ ಶರೀರದಲ್ಲಿ ಪ್ರವೇಶಿಸುವ ಪ್ರಮಾಣವು ಹೆಚ್ಚುಕಡಿಮೆ ಶೇ.೧೦ರಷ್ಟು ಕಡಿಮೆಯಾಗುತ್ತದೆ.-


ಮಾಸೋಳಿ (ಮತ್ಸ್ಯಾಕಾರದ ಕಾಲುಂಗುರ) ಅವಿವಾಹಿತ ಹುಡುಗಿಯರು ಕಾಲಿನ ನಾಲ್ಕನೆಯ ಬೆರಳಿನಲ್ಲಿ (ಕಿರುಬೆರಳಿನ ಸಮೀಪದ ಬೆರಳು) ಮಾಸೋಳಿಯನ್ನು ಧರಿಸುತ್ತಾರೆ. 


ಮಾಸೋಳಿಯು ಒಂದು ರೀತಿಯ ಕಾಲುಂಗುರವೇ ಆಗಿದೆ. ಅದರ ಆಕಾರವು ಮೀನಿನಂತಿರುತ್ತದೆ; 


ಆದುದರಿಂದ ಅದಕ್ಕೆ ಮಾಸೋಳಿ (ಮೀನು) ಎಂದು ಹೇಳುತ್ತಾರೆ. ಅ. ಕಾಲ್ಬೆರಳುಗಳಲ್ಲಿ ಮಾಸೋಳಿಯನ್ನು ಧರಿಸುವುದರಿಂದ ಬಿಂದುಒತ್ತಡದ ಉಪಾಯವಾಗಿ ಕಪ್ಪು ಶಕ್ತಿಯು ನಾಶವಾಗುತ್ತದೆ: 


ಮಾಸೋಳಿಯ ವಿಶಿಷ್ಟ ಆಕಾರದಿಂದಾಗಿ ಆ ಸ್ಥಳದಲ್ಲಿರುವ ಬಿಂದುವಿನ ಮೇಲೆ ಒತ್ತಡವು ಬರುತ್ತದೆ, ಅಂದರೆ ಬಿಂದುಒತ್ತಡದ ಉಪಾಯ ವಾಗುತ್ತದೆ. ಇದರಿಂದ ಜೀವದ ತೊಂದರೆಗಳು ಕಡಿಮೆಯಾಗುತ್ತವೆ. ಆ ಸ್ಥಳದಲ್ಲಿ ಕೆಟ್ಟ ಶಕ್ತಿಯು ಸಂಗ್ರಹಿಸಿಟ್ಟಿರುವ ಕಪ್ಪು ಶಕ್ತಿಯೂ (ತೊಂದರೆದಾಯಕ ಶಕ್ತಿಯೂ) ನಾಶವಾಗುತ್ತದೆ. 


- ಓರ್ವ ಅಜ್ಞಾತ ಶಕ್ತಿ ಆ. ಇತರ ಅಂಶಗಳು 


೧. ಅವಿವಾಹಿತ ಯುವತಿಯರು ಕಾಲಿನ ಕಿರುಬೆರಳಿನ ಪಕ್ಕದ ಬೆರಳಿನಲ್ಲಿ ಮಾಸೋಳಿಯನ್ನು ಧರಿಸುತ್ತಾರೆ. 


೨. ಮಾಸೋಳಿಯನ್ನು ಧರಿಸುವುದರಿಂದ ಕಿರುಬೆರಳಿನ ಪಕ್ಕದ ಬೆರಳಿನಲ್ಲಿನ ಅಪ್ರಕಟ ಸ್ವರೂಪದಲ್ಲಿನ ಆಪತತ್ತ್ವವು ಪ್ರಕಟವಾಗುತ್ತದೆ ಮತ್ತು ಮಾಸೋಳಿಯಲ್ಲಿನ ಸಗುಣತತ್ತ್ವದಿಂದ ಅದಕ್ಕೆ ಚಾಲನೆಯು ಸಿಗುತ್ತದೆ. 


೩. ವ್ಯಕ್ತಿಯು ನಡೆದಾಡುವಾಗ ಮಾಸೋಳಿಯಲ್ಲಿನ ಸ್ಪಂದನಗಳು ಕಾರ್ಯನಿರತವಾಗುತ್ತವೆ. ನಡಿಗೆಯ ವೇಗದಿಂದ ಅವರಿಗೆ ಮಾರಕ ಮತ್ತು ತಾರಕ ಸ್ಪಂದನಗಳು ಸಿಗುತ್ತವೆ. 


೪. ನಡೆದಾಡುವಾಗ ಭೂಮಿಯ ಮೇಲೆ ಬೀಳುವ ಒತ್ತಡ ಮತ್ತು ಭೂಮಿಗಾಗುವ ಸ್ಪರ್ಶದಿಂದ ಶಕ್ತಿಯ ಮಾರಕ ಸ್ಪಂದನಗಳು ನಿರ್ಮಾಣವಾಗಿ ಪ್ರಕ್ಷೇಪಿಸುತ್ತವೆ, ಇದರಿಂದ ಪಾತಾಳದಿಂದ ಆಕ್ರಮಣ ಮಾಡುವ ಕೆಟ್ಟ ಶಕ್ತಿಗಳಿಂದ ರಕ್ಷಣೆಯಾಗುತ್ತದೆ.’


ಕಾಲುಂಗುರದ ಬಗ್ಗೆ ವೈಜ್ಞಾನಿಕ ದೃಷ್ಟಿಕೋನವೇನು?


ಭಾರತದಲ್ಲಿ ಸ್ತ್ರೀಯರು ಕಾಲುಂಗರ ಧರಿಸಿದರೆ ಅವರನ್ನು ವಿವಾಹಿತರು ಎಂದು ಗುರುತಿಸುತ್ತಾರೆ. 


ಬಹುತೇಕ ಭಾರತೀಯ ನಾರಿಯರು, ವಿವಾಹವಾದ ಬಳಿಕ ಕಾಲುಂಗುರವನ್ನು ಧರಿಸುತ್ತಾರೆ. 


ಇದು ಕೇವಲ ಸ್ತ್ರೀಯೋರ್ವಳು ವಿವಾಹಿತೆ ಎಂಬುದರ ಸೂಚಕವಷ್ಟೇ ಅಲ್ಲ, ಇದಕ್ಕೆ ವೈಜ್ಞಾನಿಕ ಕಾರಣವೂ ಕೂಡ ಇದೆ. ಭಾರತೀಯ ವೇದಶಾಸ್ತ್ರಗಳ ಪ್ರಕಾರ (Vedham, ಅಥವಾ vedam), ಎರಡೂ ಪಾದಗಳಲ್ಲಿ ಕಾಲುಂಗುರಗಳನ್ನು ಧರಿಸುವುದರಿಂದ, ಸ್ತ್ರೀಯರ ಋತುಚಕ್ರವು ನಿಯಮಿತಗೊಂಡು, ಸಮರ್ಪಕವಾದ ಅಂತರದಲ್ಲಿ ಉಂಟಾಗುತ್ತದೆ ಎಂಬ ನಂಬಿಕೆಯಿದೆ. 


ಇದು ವಿವಾಹಿತ ಸ್ತ್ರೀಯರಿಗೆ, ಗರ್ಭ ಧರಿಸಲು ಉತ್ತಮ ವೇದಿಕೆಯನ್ನುಂಟು ಮಾಡುತ್ತದೆ. ಮಾತ್ರವಲ್ಲದೇ, ನಿರ್ದಿಷ್ಟ ನರವೊಂದು ಕಾಲಿನ ಎರಡನೆಯ ಬೆರಳನ್ನು ಗರ್ಭಾಶಯಕ್ಕೆ ಸಂಪರ್ಕಿಸುವಾಗ, ಅದು ಹೃದಯದ ಮೂಲಕ ಹಾದುಹೋಗುತ್ತದೆ ಎಂದು ಹೇಳಲಾಗುತ್ತದೆ. 


ಅದ್ದರಿಂದ, ಕಾಲುಂಗುರಗಳನ್ನು ಯಾವಾಗಲೂ ಬಲ ಮತ್ತು ಎಡ ಪಾದಗಳ ಎರಡನೆಯ ಬೆರಳುಗಳಿಗೇ ಧರಿಸಿರುವುದನ್ನು ನೀವು ಗಮನಿಸಿರಬಹುದು. 


ಇದು ಗರ್ಭಾಶಯವನ್ನು ನಿಯಂತ್ರಿಸುತ್ತದೆ ಮತ್ತು ಗರ್ಭಾಶಯಕ್ಕೆ ಸಮಪ್ರಮಾಣದ, ಸಂತುಲಿತ ರಕ್ತದೊತ್ತಡವನ್ನು ನಿರ್ವಹಿಸುವುದರ ಮೂಲಕ ಅದರ ಆರೋಗ್ಯವನ್ನು ಕಾಪಾಡುತ್ತದೆ. 


ಬೆಳ್ಳಿಯು ಒಂದು ಉತ್ತಮ ವಾಹಕವಾಗಿದ್ದು, ಅದರಿಂದ ಮಾಡಲ್ಪಟ್ಟ ಕಾಲುಂಗುರಗಳು, ಭೂಮಿಯ ಧ್ರುವ ಶಕ್ತಿಗಳನ್ನು ಹೀರಿ ಶರೀರಕ್ಕೆ ವರ್ಗಾಯಿಸುತ್ತವೆ ಹಾಗೂ ತನ್ಮೂಲಕ ಸಂಪೂರ್ಣ ದೈಹಿಕ ವ್ಯವಸ್ಥೆಗೆ ಹೊಸ ಚೈತನ್ಯವನ್ನು ಒದಗಿಸುತ್ತವೆ. 


ಮಹಾನ್ ಭಾರತೀಯ ಕಾವ್ಯವಾದ ರಾಮಾಯಣದಲ್ಲಿ ಕಾಲುಂಗುರವು ಮಹತ್ವದ ಪಾತ್ರವಹಿಸುತ್ತದೆ. ಸೀತೆಯು ರಾವಣನಿಂದ ಅಪಹರಿಸಲ್ಪಟ್ಟಾಗ, ಆಕೆಯು ಕಾಲುಂಗುರಗಳನ್ನು (kaniazhi) ಮಾರ್ಗದ ಮೇಲೆ, ಭಗವಾನ್ ಶ್ರೀರಾಮನ ಅವಗಾಹನೆಗಾಗಿ, ಅಪಹರಣಕ್ಕೆ ತಾನು ಗುರಿಯಾಗಿ ಈ ಮಾರ್ಗದ ಮೂಲಕ ಒಯ್ಯಲ್ಪಟ್ಟಿರುವೆನೆಂದು ಶ್ರೀರಾಮನು ಗುರುತಿಸಲೆಂದು ಎಸೆಯುತ್ತಾಳೆ. ಕಾಲುಂಗುರಗಳು ಅತಿ ಪ್ರಾಚೀನ ಕಾಲದಿಂದಲೂ ಬಳಕೆಯಲ್ಲಿದ್ದವು ಎಂಬುದನ್ನು ಇದು ಸೂಚಿಸುತ್ತದೆ. 


ಕಾಲ್ಗೆಜ್ಜೆ, ಕಾಲುಂಗುರ ಮತ್ತು ಮಾಸೋಳಿ (ಮೀನಿನ ಆಕಾರದ ಕಾಲುಂಗುರ) ಇವುಗಳನ್ನು ಬೆಳ್ಳಿಯಿಂದಲೇ ಏಕೆ ತಯಾರಿಸುತ್ತಾರೆ? 


ಪಾತಾಳದಿಂದ ಪ್ರಕ್ಷೇಪಿತವಾಗುವ ಕನಿಷ್ಠಲಹರಿಗಳಿಂದ ರಕ್ಷಣೆಯನ್ನು ಪಡೆದುಕೊಳ್ಳಲು ಸೊಂಟದಲ್ಲಿನ ಮತ್ತು ಕಾಲುಗಳಲ್ಲಿನ ಆಭರಣಗಳನ್ನು ಬೆಳ್ಳಿಯಿಂದ ತಯಾರಿಸುತ್ತಾರೆ:


 ‘ಸಾಮಾನ್ಯವಾಗಿ ಸ್ತ್ರೀಯರ ಸೊಂಟದಲ್ಲಿ ಮತ್ತು ಕಾಲುಗಳಲ್ಲಿ ಧರಿಸುವ ಆಭರಣಗಳನ್ನು ಬೆಳ್ಳಿಯಿಂದ ತಯಾರಿಸುತ್ತಾರೆ. ರಜೋಗುಣೀ ಮತ್ತು ಚೈತನ್ಯಯುಕ್ತ ಇಚ್ಛಾಲಹರಿಗಳನ್ನು ಗ್ರಹಿಸುವ ಕ್ಷಮತೆಯು ಬೆಳ್ಳಿಯಲ್ಲಿ ಹೆಚ್ಚಿರುವುದರಿಂದ ಆಯಾ ಕಾರ್ಯಕ್ಕೆ ಪೂರಕವಾಗಿರುವ ಲೋಹದ ಆಭರಣಗಳನ್ನು ಆಯಾಯ ಅವಯವಗಳಿಗಾಗಿ ಉಪಯೋಗಿಸಲಾಗುತ್ತದೆ. 


ವೇಗದಿಂದ ಆಘಾತ ಮಾಡುವುದು ರಜೋಗುಣದ ವೈಶಿಷ್ಟ್ಯವಾಗಿರುವುದರಿಂದ ಬೆಳ್ಳಿಯ ಲೋಹದ ಆಭರಣಗಳನ್ನು ಪಾತಾಳದಿಂದ ಪ್ರಕ್ಷೇಪಿತವಾಗುವ ಪೃಥ್ವಿ ಮತ್ತು ಆಪತತ್ತ್ವಯುಕ್ತ ತೊಂದರೆದಾಯಕ ಆಘಾತದಾಯಕ ಲಹರಿಗಳಿಂದ ರಕ್ಷಣೆ ಪಡೆಯಲು ವಿಶೇಷವಾಗಿ ಉಪಯೋಗಿಸಲಾಗುತ್ತದೆ.

***


No comments:

Post a Comment