SEARCH HERE

Friday 15 October 2021

ನೀರು ತುಂಬುವ ಹಬ್ಬ jalapurna trayodashi ashvina bahula trayodashi

 ನೀರು ತುಂಬುವ ಹಬ್ಬ- 

ಧನತ್ರಯೋದಶೀ,
ಜಲಪೂರ್ಣತ್ರಯೋದಶೀ, 
ಯಮದೀಪದಾನ

ಹೆಸರೇ ಹೇಳುವಂತೆ ನೀರನ್ನು ಸಂಗ್ರಹಿಸುವ ದಿನ. ಈ ದಿನ ಸ್ನಾನದ ಮನೆ, ಬಚ್ಚಲನ್ನು ಸ್ವಚ್ಛಮಾಡಿ, ಮಾರನೆಯ ದಿನದ ಅಭ್ಯಂಜನಕ್ಕೆ ನೀರು ಹಿಡಿದು ಇಡುತ್ತಾರೆ. ಕೊಳೆಯನ್ನು ಹೋಗಿಸಿ ಮನೆಯನ್ನು ಶುಭ್ರಮಾಡುವಂತೆ , ನಮ್ಮ ಮನಸಿನಲ್ಲಿರುವ ಕೆಟ್ಟ ವಿಷಯಗಳನ್ನು ತೊಲಗಿಸಿ ನಿರ್ಮಲವಾಗಿ ಇಟ್ಟುಕೊಳ್ಳಿ ಎಂಬ ಸಂಕೇತ ಇರಬಹುದು. ಹಿಂದಿನ ಕಾಲದಲ್ಲಿ ತುಂಬಿದ ಸಂಸಾರ, ಮನೆಯಲ್ಲಿ ಬಹಳ ಜನ ಇರುತ್ತಿದ್ದರು. ಎಲ್ಲರೂ ಒಂದೇ ದಿನ ಅಭ್ಯಂಜನ ಮಾಡಬೇಕಾದರೆ ಸಾಕಷ್ಟು ನೀರು ಮೊದಲೇ ಶೇಖರಿಸಿ ಇಡಬೇಕಿತ್ತು.ಹೀಗಾಗಿ ಈ ದಿನ ನೀರುಹಿಡಿಯುವುದರಲ್ಲೇ ಕಳೆದು ಹೋಗುತ್ತಿತ್ತು ಅನ್ನಿಸುತ್ತದೆ.ಅದಕ್ಕೆ ಈ ದಿನವನ್ನು ನೀರು ತುಂಬುವ ಹಬ್ಬವೆಂದು ಆಚರಿಸುವ ವಾಡಿಕೆ ಬಂತೇನೋ.ಇದು ನನ್ನ ವೈಯಕ್ತಿಕ ಅಭಿಪ್ರಾಯವಷ್ಟೆ.

ನೀರು ತುಂಬುವ ಹಬ್ಬದ ದಿನ ಏನು ಮಾಡಬೇಕು?
1)ಹಂಡೆತುಂಬಿ ಕಾಯಿಸಿ ಸ್ನಾನ ಮಾಡುವ ಅನುಕೂಲ ಇದ್ದವರು ಅದನ್ನು ತಿಕ್ಕಿ ತೊಳೆದು ಅಲಂಕರಿಸಿ ಶುದ್ಧವಾದ ನೀರನ್ನು ಮುಕ್ಕಾಲು ಭಾಗ ತುಂಬಿ ಇಡಿ. 
2)ಅನಂತರ ಬಾವಿ ಇದ್ದವರು ತಮ್ಮ ಮನೆಯ ಸಂಪ್ರದಾಯದಂತೆ ನೀರು ಸೇದಿ ತಂದು ಒಂದು ಕಲಶದಲ್ಲಿ ದೇವರ ಕೊಣೆಯೊಳಗೋ ಹೊರಗೋ ಶುದ್ಧವಾದ ಜಾಗದಲ್ಲೋ ಇಡಿ

3)ತಂಡುಲಾಕ್ಷತೆ, ಹೂವು, ಹಣ್ಣು , ಗಂಧ, ಅರಸಿಣ ಪುಡಿ, ಕುಂಕುಮ ಇತ್ಯಾದಿ  ಸಿದ್ಧಪಡಿಸಿ. 

4)ಮಂತ್ರಾಕ್ಷತೆ , ಹೂವು ಕೈಯಲ್ಲಿ ಹಿಡಿದು ನೀರು ತುಂಬಿದ ಕಲಶದಲ್ಲಿ ತನ್ನ ಅಂಗುಷ್ಟದಿಂದ ಗಂಗೆಗೆ ಜನ್ಮವಿತ್ತ ರಮಾಪತಿ ತ್ರಿವಿಕ್ರಮನನ್ನು ಅವಾಹಿಸಿ. 

ಮಮ ಗುರ್ವಂತರ್ಗತ ವರುಣಾಂತರ್ಗತ
ಭಾರತೀರಮಣ ಮುಖ್ಯಪ್ರಾಣಾಂತರ್ಗತ 
ಗಂಗಾಜನಕಂ ರಮಾಸಹಿತ ತ್ರಿವಿಕ್ರಮಂ 
ಆವಾಹಯಾಮಿ. ಪ್ರಸೀದ ಪ್ರಸೀದ 
ಭಗವನ್ ಆಗಚ್ಛ ಆಗಚ್ಛ 

ಎಂದು ಕಲಶದಲ್ಲಿ ಹೂವು ಅಕ್ಷತೆ ಹಾಕಿ.

ನಂತರ ಆಸನ, ಅರ್ಘ್ಯ, ಪಾದ್ಯ, ಆಚಮನ, ಮಧುಪರ್ಕ, ಸ್ನಾನ, ವಸ್ತ್ರ, ಯಜ್ನೋಪವೀತ, ಗಂಧ, ಪುಷ್ಪ, ಧೂಪ, ದೀಪ, ನೈವೇದ್ಯ, ತಾಂಬೂಲ, ಮಂಗಲಾರತಿ, ಮಂತ್ರಪುಷ್ಪ, ನಮಸ್ಕಾರ ಅರ್ಪಿಸಿ. 

5)ನಂತರ ಅಕ್ಷತೆ ಹೂವು ಕೈಯಲ್ಲಿ ಹಿಡಿದುಕೊಂಡು ಕಲಶದಲ್ಲಿ ಗಂಗಾದೇವಿಯನ್ನು ಅವಾಹಿಸಿ. .

ಗಂಗೇ ಚ ಯಮುನೇ ಕೃಷ್ಣೇ ಗೋದಾವರೀ ಸರಸ್ವತೀ|
ನರ್ಮದೇ ಸಿಂಧು ಕಾವೇರೀ ಜಲೇ$ಸ್ಮಿನ್ ಸನ್ನಿಧಿಮ್ ಕುರು||
ಕಲಶಮಧ್ಯೆ ತ್ರಿವಿಕ್ರಮ ರೂಪಿಣಃ ಪುತ್ರಿಮ್ ಗಂಗಾಂ ಆವಾಹಯಾಮಿ 

ಎಂದು ಅಕ್ಷತೆ ಹೂವು ಹಾಕಿ ಮುಂದಿನ ಮಂತ್ರಗಳಿಂದಲೂ  ಕಲಶದಲ್ಲಿ ಅಕ್ಷತೆ ಹಾಕಿ 

ಭೂ: ಗಂಗಾಂ ಆವಾಹಯಾಮಿ,
ಭುವಃ ಗಂಗಾಂ ಆವಾಹಯಾಮಿ, 
ಸ್ವ: ಗಂಗಾಂ ಆವಾಹಯಾಮಿ, 
ಭೂರ್ಭುವಸ್ವ: ಗಂಗಾಂ ಆವಾಹಯಾಮಿ.

ಆ ನಂತರ ಮೇಲೆ ಹೇಳಿದಂತೆ ಅಸನದಿಂದ ವಸ್ತ್ರವನ್ನು ಅರ್ಪಿಸಿ ಹರಿದ್ರಾ, ಕುಂಕುಮ, ಗಂಧ , ಪುಷ್ಪ ಅರ್ಪಿಸಿ

6)ಈ ಕೆಳಗಿನ ನಾಮಗಳಿಂದ ಅಕ್ಷತೆ ಹಾಕಿ

ನಂದಿನ್ಯೈ ನಮಃ, ನಲಿನ್ಯೆ ನಮಃ, ಸೀತಾಯೈ ನಮಃ , ಮಾಲತ್ಯೈ ನಮಃ , ಮಲಾಪಹಾಯೈ ನಮಃ, ವಿಷ್ಣುಪಾದಾಬ್ಜ ಸಂಭೂತಾಯೈ ನಮಃ, ಗಂಗಾಯೈ ನಮಃ, ತ್ರಿಪಥಗಾಮಿನ್ಯೈ ನಮಃ , ಭಾಗೀರಥ್ಯೈ ನಮಃ, ಭೋಗವತ್ಯೈ ನಮಃ, ಜಾಹ್ನವ್ಯೈ ನಮಃ, ತ್ರಿದಶೇಶ್ವರ್ಯೈ ನಮಃ, ಗಂಗಾಭಾಗೀರಥ್ಯೆ ನಮಃ

7)ಧೂಪವನ್ನು ತೋರಿಸಿ

ವನಸ್ಪತ್ಯುದ್ಭವೋ ದಿವ್ಯೋ ಗಂಧಾಢ್ಯೋ ಗಂಧ ಉತ್ತಮಃ |
ಆಘ್ರೇಯಃ ಸರ್ವದೇವಾನಾ೦ ಧೂಪೋ$ಯಂ ಪ್ರತಿಗೃಹ್ಯತಾಮ್ ||

8)ಸಾಜ್ಯ೦ ತ್ರಿವರ್ತಿಸಂಯುಕ್ತ೦ ವಹ್ನಿನಾ ದ್ಯೋತಿತಂ ಮಯಾ|
ದೀಪಂ ಗೃಹಾಣ ದೇವೇಶ ತ್ರೈಲೋಕ್ಯತಿಮಿರಾಪಹ||

ಎನ್ನುತ್ತಾ ಮೂರು ಬತ್ತಿಯ ಆರತಿ ತೋರಿಸಿ ನಂದಿಸಿ

9)ಹಣ್ಣು ಕಾಯಿ ಮತ್ತು ಅನುಕೂಲ ಇದ್ದಲ್ಲಿ ಇತರ ನೈವೇದ್ಯಗಳನ್ನು ಮೊದಲು ತ್ರಿವಿಕ್ರಮ ದೇವರಿಗೆ ಅರ್ಪಿಸಿ ಅನಂತರ ರಮಾದೇವಿ , ಮುಖ್ಯಪ್ರಾಣ ದೇವರಿಗೆ ಅರ್ಪಿಸಿ. ಇದರೊಳಗಿಂದ ಸ್ವಲ್ಪ ಬೇರೊಂದು ತಟ್ಟೆಯಲ್ಲಿ ಬಡಿಸಿ ಭಾಗೀರಥಿ ದೇವಿಗೆ ಅದನ್ನು ನಿವೇದಿಸಿ.

10)ತದನಂತರ ಕರ್ಪೂರ ಹಾಕಿ ಮಹಾಮಂಗಳಾರತಿ ಮೊದಲು ತ್ರಿವಿಕ್ರಮ ದೇವರು ನಂತರ ರಮಾದೇವಿ ಪ್ರಾಣದೇವರಿಗೆ ತೋರಿಸಿ ಭಾಗೀರಥಿಗೆ ತೋರಿಸಿ. 

11)ನಾರಾಯಣಾಯ ವಿದ್ಮಹೇ ವಾಸುದೇವಾಯ ದೀಮಹಿ 
ತನ್ನೋ ವಿಷ್ಣು: ಪ್ರಚೋದಯಾತ್ 

ಎನ್ನುತ್ತಾ ತ್ರಿವಿಕ್ರಮ ದೇವರಿಗೆ ಮಂತ್ರಪುಷ್ಪಾ೦ಜಲಿ ಅರ್ಪಿಸಿ. 

12)ಭಾಗೀರಥೀ ದೇವಿಯನ್ನು ಪ್ರಾರ್ಥಿಸಿ. 

ಹೇ ಗಂಗೇ! ತವ ಕೋಮಲಾಂಘ್ರಿ ನಲಿನಂ ರಂಭೋರು ನೀವಿಲಸತ್ 
ಕಾಂಚೀದಾಮ ತನೂದರಂ ಘನಕುಚ ವ್ಯಾಕೀರ್ಣಹಾರಂ ವಪು: |
ಸನ್ಮುದ್ರಾ೦ಗದ ಕಂಕಣಾವೃತಕರ೦ ಸ್ಮೇರಂ ಸ್ಫುರತ್ಕುಂಡಲಂ 
ಸಾರಂಗಾಕ್ಷಿ ಜಲಾನ್ಯದಿಂದುರುಚಯೇ ಜಾನಂತಿ ತೇ$ನ್ಯೇ ಜಲಾತ್ | 

ಪ್ರಾರ್ಥನಾಂ ಸಮರ್ಪಯಾಮಿ ಎನ್ನುತ್ತ ಅಕ್ಷತೆ ಹಾಕಿ ನಮಸ್ಕರಿಸಿ.

13)ತದನಂತರ 
ಯಸ್ಯ ಸ್ಮೃತ್ಯಾ ಶ್ಲೋಕ ಹೇಳಿ 

ಅನೇನ ಅಸ್ಮದ್ ಗುರ್ವಂತರ್ಗತ ಭಾರತೀರಮಣ ಮುಖ್ಯಪ್ರಾಣಾ೦ತರ್ಗತ ಗಂಗಾಜನಕ ಶ್ರೀರಮಾತ್ರಿವಿಕ್ರಮ ರೂಪಿ ಶ್ರೀಲಕ್ಷ್ಮೀನಾರಾಯಣ: ಪ್ರೀಯತಾಂ ಪ್ರೀತೋ ಭಾವತು ತತ್ ಸರ್ವಂ ಶ್ರೀಕೃಷ್ಣಾರ್ಪಣಾಮಸ್ತು ಎಂದು ಅರ್ಪಿಸಿ.

14)ಈಗ ಆ ಕಲಶದ ನೀರನ್ನು ಗಂಟೆ, ಜಾಗಟೆ, ಶಂಖಾದಿ ವಾದ್ಯ ಪುರಸ್ಸರ ತುಂಬಿಟ್ಟ ಹಂಡೆಯಲ್ಲಿ ಹಾಕಿ

15)ಸೂರ್ಯಾಸ್ತದ ನಂತರ ಇಂದಿನಿಂದ ಆಕಾಶದೀಪವನ್ನು ಹಚ್ಚಬೇಕು. 

ಒಬ್ಬ ಮನುಷ್ಯನ ಎತ್ತರದಷ್ಟು ಒಂದು ಕೋಲನ್ನು ಅಂಗಳದಲ್ಲಿ ನೆಟ್ಟು (ಬಿದಿರಿನ ಕೋಲು ಉಪಯೋಗಿಸಬಾರದು) ಆ ಕೋಲಿನ ತುದಿಯಲ್ಲಿ ಅಷ್ಟದಲ ಕಮಲಾಕಾರದಲ್ಲಿ ಎಂಟು ದಿಕ್ಕುಗಳಲ್ಲಿ ಎಂಟು ದೀಪಗಳನ್ನೂ ಮಧ್ಯೆ ಒಂದು ದೊಡ್ಡ ದೀಪವನ್ನೂ ಹಚ್ಚಬೇಕು. ಎಳ್ಳೆಣ್ಣೆ ಬಿಟ್ಟು ಬೇರೆ ಎಣ್ಣೆ ಉಪಯೋಗಿಸಬಾರದು. 

ಇದನ್ನು ಒಂದು ತಿಂಗಳು ಹಚ್ಚಬೇಕು.

16)ಹಾಗೆಯೇ ಮನೆಯ ಹೊರಗೆ ಎತ್ತರದಲ್ಲಿ ಯಮದೇವರಿಗೆ ಕೂಡಾ ಇಂದು ಒಂದು ದೀಪ ಹಚ್ಚಬೇಕು. 
***

following is by sri. ನರಹರಿ ಸುಮಧ್ವ

ಯಮದೀಪದಾನ - ಆಶ್ವಯುಜ ಬಹುಳ ತ್ರಯೋದಶಿ

ಆಶ್ವಯುಜ ಬಹುಳ ತ್ರಯೋದಶಿಯಂದು ಯಮದೀಪದಾನ ಮಾಡತಕ್ಕದ್ದು.
ಈ ದಿನ ಸಾಯಂಕಾಲ ದೀಪವನ್ನು ಯಮನಿಗಾಗಿ ದಕ್ಷಿಣದಿಕ್ಕಿಗೆ ಮುಖಮಾಡಿ ಮಣ್ಣಿನ ಹಣತೆಯಲ್ಲಿ ಹಚ್ಚಬೇಕು. ಈ ದೀಪ ಮಾರನೇ ದಿನ ಅರುಣೋದಯ ಕಾಲದತನಕ ಉರಿಯುವಂತೆ ಹಚ್ಚಬೇಕು. ಇದರಿಂದ ಅಪಮೃತ್ಯು ಪರಿಹಾರವಾಗಲಿದೆ. ಮನೆಯ ಎತ್ತರದ ಭಾಗದಲ್ಲಿ ಇದನ್ನು ಹಚ್ಚುವುದರಿಂದ ಇದನ್ನು ಆಕಾಶದೀಪ ಎನ್ನುತ್ತಾರೆ.

ಅಕಾಶದೀಪ ಮತ್ತು ಯಮದೀಪದಾನ ಮಾಡುವ ಉದ್ದೇಶ :
ಅ. ಗಗನಮಾರ್ಗದಲ್ಲಿ ಸಂಚರಿಸುವ ಪಿತೃದೇವತೆಗಳಿಗೆ ದಾರಿ ತೀರಿಸುವುದು.
ಆ. ಪಿತೃದೇವತೆಗಳ ತೃಪ್ತಿ
ಇ. ದೀಪ ಬೆಳಗುವುದರಿಂದ ನಮ್ಮ ಸಂಸ್ಕೃತಿಯ ಪ್ರೋತ್ಸಾಹ.
ಈ. ಯಮಧರ್ಮರಾಜನ ಪ್ರೀತಿಗಾಗಿ ಮಾಡುವ ದೀಪದಾನ. ಯಮರಾಜನ ಕಾರ್ಯವು ಪ್ರಾಣಹರಣ ಮಾಡುವುದಾಗಿದೆ. ಕಾಲಮೃತ್ಯುವು ಯಾರಿಗೂ ತಪ್ಪಿಲ್ಲ ಮತ್ತು ಅದನ್ನು ತಪ್ಪಿಸಲೂ ಆಗುವುದಿಲ್ಲ. ಆದರೆ ಅಕಾಲ ಮೃತ್ಯುವು ಯಾರಿಗೂ ಬರಬಾರದೆಂದು ಯಮಧರ್ಮನಿಗೆ ಕಣಕದಿಂದ ತಯಾರಿಸಿದ  ಎಳ್ಳೆಣ್ಣೆಯ ದೀಪವನ್ನು ತಯಾರಿಸಿ ಸಂಜೆಯ ಹೊತ್ತಿನಲ್ಲಿ ಮನೆಯ ಹೊರಗೆ ದಕ್ಷಿಣಕ್ಕೆ ಮುಖ ಮಾಡಿಡಬೇಕು.


ಇತರ ಯಾವುದೇ ದಿನದಂದು ದೀಪವನ್ನು ದಕ್ಷಿಣ ದಿಕ್ಕಿಗೆ ಮುಖ ಮಾಡಿ ಇಡುವುದಿಲ್ಲ. ಈ ದಿನ ಮಾತ್ರ ದೀಪವನ್ನು ದಕ್ಷಿಣಕ್ಕೆ ಮುಖ ಮಾಡಿ ಇಡಬೇಕು. ಆನಂತರ ಈ ಮಂತ್ರದಿಂದ ಪ್ರಾರ್ಥನೆಯನ್ನು ಮಾಡಬೇಕು.

ಸಂಕಲ್ಪ :  ಪ್ರಣವಸ್ಯ……. ಆಶ್ವಯುಜ ಕೃಷ್ಣ ಪಕ್ಷ ತ್ರಯೋದಶ್ಯಾಂ ಶುಭತಿಥೌ, ಪ್ರದೋಷ ಸಮಯೇ, ಯಮಾಂತರ್ಗತ ಶ್ರೀ ವಿಷ್ಣು ಪ್ರೇರಣಯಾ, ಶ್ರೀ ವಿಷ್ಣು ಪ್ರೀತ್ಯರ್ಥಂ ಯಮದೀಪದಾನಂ ಕರಿಷ್ಯೇ. ಇದು ಯಮನಿಗೆ ಉದ್ದಿಶ್ಯವಾದ ದೀಪಜ್ವಲನವಾದ್ದರಿಂದ ಯಮದೀಪದಾನ ಎಂದು ಹೆಸರಾಗಿದೆ.

ಯಮದೀಪದ ತಯಾರಿಕೆ  : ಅಷ್ಟಭುಜಾಕಾಲದಲ್ಲಿ ಅಥವಾ ದ್ವಾದಶ ಭುಜಾಕಾರದಲ್ಲಿ ಬಿದಿರಿನ ಕೋಲುಗಳಿಂದ ಗೂಡು ರಚಿಸಿ, ದೀಪವು ಶಾಂತವಾಗದಂತೆ ಅದನ್ನು ಬಟ್ಟೆ ಅಥವಾ ಕಾಗದದಿಂದ ಸುತ್ತಿ ಮನೆಯ ಎತ್ತರದ ಭಾಗದಲ್ಲಿ ಹಚ್ಚಿಡಬೇಕು.    ಕೆಲವರು ವಿದ್ಯುದ್ದೀಪಗಳಿಂದ ಅಲಂಕಾರ ಮಾಡುತ್ತಾರೆ.  ಆದರೆ ಎಣ್ಣೆ ದೀಪವನ್ನು ಹಚ್ಚುವುದರಿಂದ ಪುಣ್ಯ ಬರುತ್ತದೆ.


ಸಾಧ್ಯವಾದರೆ ಒಬ್ಬ ಬ್ರಾಹ್ಮಣನಿಗೆ ಒಂದು ಜೊತೆ ದೀಪವನ್ನು ಯಥಾಶಕ್ತಿ ದಕ್ಷಿಣೆ ಸಹಿತ ದಾನ ನೀಡಬೇಕು.


ದೀಪದಾನ ಮಂತ್ರ :

ಮೃತ್ಯುನಾ ಪಾಶದಂಡಾಭ್ಯಾಂ 
ಕಾಲೇನ ಶ್ಯಾಮಯಾಸಹ |
ತ್ರಯೋದಶ್ಯಾಂ ದೀಪದಾನಾತ್ ಸೂರ್ಯಜಃ ಪ್ರೀಯತಾಂ ಮಮ |

ಹಸ್ತದಲ್ಲಿ ಪಾಶ ದಂಡಗಳನ್ನು ಹಿಡಿದ ಸೂರ್ಯಪುತ್ರ ಯಮ ಧರ್ಮರಾಜನು ಶ್ಯಾಮಲಾದೇವಿಯೊಂದಿಗೆ, ತ್ರಯೋದಶಿಯ ದೀಪದಾನದಿಂದ ಸಂತುಷ್ಟನಾಗಿ ಅನುಗ್ರಹಿಸಲಿ ಎಂದು ಪ್ರಾರ್ಥಿಸಬೇಕು.

ಇಂದಿನಿಂದ ಪ್ರತಿದಿನ ದೀಪವನ್ನು ಕಾರ್ತೀಕ ಮಾಸದ ಅಮಾವಾಸ್ಯೆಯವರೆಗೂ ಪ್ರಜ್ವಲಿಸಬೇಕು. ಸಾಧ್ಯವಿಲ್ಲದಿದ್ದರೆ ಬೇರೆಯವರು ಹಚ್ಚಿದ ದೀಪದ ತುದಿಯನ್ನು (ಕರಿಯನ್ನು) ತೆಗೆದು ದೀಪ ಆರದಂತೆ ನೋಡಿಕೊಳ್ಳಿ.

ಇದರ ಬಗ್ಗೆ ಒಂದು ಕಥೆಯಿದೆ :

ಹಿಂದೆ ಒಬ್ಬ ರಾಜಕುಮಾರನ ಜಾತಕ ರೀತ್ಯಾ ಅವನ ಮೃತ್ಯು ಸರ್ಪ ಕಡಿತದಿಂದ ಅವನ ವಿವಾಹವಾದ ನಾಲ್ಕನೇ ದಿನ ಸಾವು ಬರಬೇಕಿತ್ತು. ಆದರೆ ಅವನ ಪತ್ನಿ ಆ ನಾಲ್ಕನೇ ದಿನ ಅವನು ನಿದ್ರಿಸಲು ಬಿಡಲಿಲ್ಲ. ಅವಳು ತನ್ನ ಕೊಠಡಿಯ ಹೊರಗೆ ತನ್ನೆಲ್ಲಾ ಆಭರಣಗಳನ್ನು ಇಟ್ಟು ಅದರ ಸುತ್ತಲೂ ಲೆಕ್ಕವಿಲ್ಲದಷ್ಟು ದೀಪದ ಹಣತೆ ಹಚ್ಚಿ ದೇವರನಾಮಗಳನ್ನು ಪಾಡುತ್ತಾ, ಕಥೆಗಳನ್ನು ಹೇಳುತ್ತಾ ರಾಜಕುಮಾರ ನಿದ್ರಿಸದಂತೆ ನೋಡಿಕೊಂಡಳು. ಅದೇ ಸಮಯದಲ್ಲಿ ಯಮಧರ್ಮ ಹಾವಿನ ರೂಪದಲ್ಲಿ ಅಲ್ಲಿಗೆ ಬಂದಾಗ ಆ ದೀಪಗಳ ತೀವ್ರ ಪ್ರಕಾಶದ ಸಮೂಹದ ಮಧ್ಯೆ ಒಳ ಪ್ರವೇಶಿಸಲಾಗದೆ ಆಭರಣರಾಶಿಗಳ ಮೇಲೆ ಕುಳಿತು ಆಕೆಯ ಹಾಡು ಕೇಳುತ್ತಾ ಕುಳಿತನು. ತನ್ನ ಪತಿಯ ಪ್ರಾಣವನ್ನು ಉಳಿಸಿದಳು. ಅಂದಿನಿಂದ ಯಮದೀಪ ಎಂಬ ಹೆಸರಿನಿಂದ ದೀಪವನ್ನು ಯಮನ ದಿಕ್ಕಿನಲ್ಲಿ ಬೆಳಗುವ ಸಂಪ್ರದಾಯ ಇದೆ.
END
*******

ಜಲಪೂರ್ಣ ತ್ರಯೋದಶಿ  ನೀರು ತುಂಬುವ ಹಬ್ಬ 

What is Jalapoorna Trayodashi ? 
ಜಲಪೂರ್ಣ ತ್ರಯೋದಶಿ

ಆಶ್ವೀಜ ಶುದ್ಧ ತ್ರಯೋದಶಿಯಂದು ನೀರು ತುಂಬುವ ಹಬ್ಬದ ಆಚರಣೆ ಮಾಡಲಾಗುತ್ತದೆ.  ಅಂದು ನೀರು ತುಂಬಿಸುವ ಪಾತ್ರೆ ಮತ್ತು ನೀರು ಕಾಯಿಸುವ ಹಂಡೆಗಳನ್ನು ತೊಳೆದು ಅವನ್ನು ಅಲಂಕರಿಸಬೇಕು.   ಅನಂತರ ಸಮೀಪದ ಬಾವಿ, ಕೆರೆ, ನದಿಯಿಂದ ನೀರು ತಂದು ತುಂಬಿಸಿ, ಗಂಗೆ ಪೂಜೆ ಮಾಡಬೇಕು.   ದೇವರ ಮುಂದೆ ಮಂಡಲವನ್ನು ಹಾಕಿ (ನೀರಿನಲ್ಲಿ), ರಂಗೋಲಿಯನ್ನು ಬರೆದು, ಅದನ್ನು ಅಲಂಕರಿಸಿ,  ಗಂಗೆಯನ್ನು ಒಂದು ಪಾತ್ರೆಯಲ್ಲಿ ಇಟ್ಟು ದೇವರಿಗೆ ಸಮರ್ಪಿಸಬೇಕು.  ದೇವರ ಮುಂದೆ ಮತ್ತು  ತುಳಸೀ ಗಿಡದ ಮುಂದೆ ದೀಪವನ್ನು ಹಚ್ಚಿ,  ಆಚಮನ ಮಾಡಿ, ಸಂಕಲ್ಪ ಪುರಸ್ಸರವಾಗಿ, ದ್ವಾದಶ ನಾಮಗಳಿಂದ ಗಂಗೆಯನ್ನು ಪೂಜಿಸಿ, ಸಕಲ ತೀರ್ಥಾಭಿಮಾನಿ ದೇವತೆಗಳನ್ನು ಸ್ಮರಿಸಿ, ನೈವೇದ್ಯವನ್ನು ಮಾಡಿ, ನೀರಾಜನವನ್ನು ಸಮರ್ಪಿಸಿ, ಗಂಗೆಯನ್ನು ಪೂಜಿಸಬೇಕು,   ಇಲ್ಲಿ ನೀರೇ ಗಂಗೆಯಲ್ಲ.  ಅದರಲ್ಲಿ ಗಂಗಾದಿ ಸಕಲ ತೀರ್ಥಾಭಿಮಾನಿ ದೇವತೆಗಳು ಸನ್ನಿಹಿತರಾಗಿರುತ್ತಾರೆ ಎಂದು ಭಾವಿಸಬೇಕು.

ಗಂಗೇ ಚ ಯಮುನೇ ಚೈವ ಗೋದಾವರೀ ಸರಸ್ವತಿ |
ನರ್ಮದೇ ಸಿಂದು ಕಾವೇರಿ ಜಲೇಸ್ಮಿನ್ ಸನ್ನಿಧಿಂ ಕುರು  |

ಗಂಗಾಯೈ ನಮ: | ಗಂಗಾಂ ಅಸ್ಮಿನ್ ಕಲಶೇ ಆವಾಹಯಾಮಿ, ಅರ್ಘ್ಯಪಾದ್ಯ ಆಚಮಾನೀಯಾದಿ ಸರ್ವೋಪಚಾರ ಪೂಜಾಂ ಸಮರ್ಪಯಾಮಿ |

ದ್ವಾದಶನಾಮ ಪೂಜ  –  ನಂದಿನೈ ನಮ: | ನಲಿನ್ಯೈ ನಮ: | ಸೀತಾಯೈ ನಮ: | ಮಾಲತ್ಯೈ ನಮ: | ಮಲಾಪಹಾಯೈ ನಮ: | ವಿಷ್ಣುಪಾದಾಬ್ಜಸಂಭೂತಾಯೈ ನಮ: | ಗಂಗಾಯೈ ನಮ: | ತ್ರಿಪಥಗಾಮಿನ್ಯೈ ನಮ: | ಭಾಗೀರಥ್ಯೈ ನಮ:|ಭೋಗವತ್ಯೈ ನಮ: | ಜಾಹ್ನವ್ಯೈ ನಮ: | ತ್ರಿದಶೇಶ್ವರ್ಯೈರ್ನಮ: |

ಧೂಪಂ, ದೀಪಂ, ಗೂಡಾಪೂಪ ನೈವೇದ್ಯಂ ಸಮರ್ಪಯಾಮಿ |

ನೀರಾಜನಂ ಸಮರ್ಪಯಾಮಿ |

ಯಮದೀಪದಾನ :       ಯಮಧರ್ಮರಾಜನ ಪ್ರೀತಿಗಾಗಿ ಮಾಡುವ ದೀಪದಾನ.   ಯಮರಾಜನ ಕಾರ್ಯವು ಪ್ರಾಣಹರಣ ಮಾಡುವುದಾಗಿದೆ. ಕಾಲಮೃತ್ಯುವು ಯಾರಿಗೂ ತಪ್ಪಿಲ್ಲ ಮತ್ತು ಅದನ್ನು ತಪ್ಪಿಸಲೂ ಆಗುವುದಿಲ್ಲ. ಆದರೆ ಅಕಾಲ ಮೃತ್ಯುವು ಯಾರಿಗೂ ಬರಬಾರದೆಂದು  ಯಮಧರ್ಮನಿಗೆ ಕಣಕದಿಂದ ತಯಾರಿಸಿದ ಎಣ್ಣೆಯ ದೀಪವನ್ನು (ಹದಿಮೂರು ದೀಪಗಳನ್ನು) ತಯಾರಿಸಿ ಸಂಜೆಯ ಹೊತ್ತಿನಲ್ಲಿ ಮನೆಯ ಹೊರಗೆ ದಕ್ಷಿಣಕ್ಕೆ ಮುಖ ಮಾಡಿಡಬೇಕು. ಇತರ ಯಾವುದೇ ದಿನದಂದು ದೀಪವನ್ನು ದಕ್ಷಿಣ ದಿಕ್ಕಿಗೆ ಮುಖ ಮಾಡಿ ಇಡುವುದಿಲ್ಲ.  ಈ ದಿನ ಮಾತ್ರ ದೀಪವನ್ನು ದಕ್ಷಿಣಕ್ಕೆ ಮುಖ ಮಾಡಿ ಇಡಬೇಕು. ಆನಂತರ ಈ ಮಂತ್ರದಿಂದ ಪ್ರಾರ್ಥನೆಯನ್ನು ಮಾಡಬೇಕು.

ಮೃತ್ಯುನಾ ಪಾಶದಂಡಾಭ್ಯಾಂ ಕಾಲೇನ ಶ್ಯಾಮಯಾಸಹ |
ತ್ರಯೋದಶ್ಯಾಂ ದೀಪದಾನಾತ್ ಸೂರ್ಯಜಃ ಪ್ರೀಯತಾಂ ಮಮ | 

ಹಸ್ತದಲ್ಲಿ ಪಾಶ ದಂಡಗಳನ್ನು ಹಿಡಿದ ಸೂರ್ಯಪುತ್ರ ಯಮಧರ್ಮರಾಜನು ಶ್ಯಾಮಲಾದೇವಿಯೊಂದಿಗೆ, ತ್ರಯೋದಶಿಯ ದೀಪದಾನದಿಂದ ಸಂತುಷ್ಟನಾಗಿ ಅನುಗ್ರಹಿಸಲಿ ಎಂದು ಪ್ರಾರ್ಥಿಸಬೇಕು.

This is popularly called as Neeru tumbuva habba or water filling festival.    What is this? ನೀರು  ‘Neeru’ means water (jala)  and the tradition of physical cleaning and refilling the container.   This cleaning is done to remove all dirt, evil and  inauspicious things before the entry of Lakshmidevi during Diwali day. 

This is done on Ashwayuja Krishna trayOdashi.  This is popularly called as ನೀರು ತುಂಬುವ ಹಬ್ಬ  (neeru tumbuva habba).  On Ashwayuja Krishna trayodashi, we have to do the gangaa pooja.  We have to clean the haMDe (ಹಂಡೆ).  Ofcourse, now a days, we are rarely seeing haMde, those who are not having haMde, they have to clean their geyser, boiler, etc., We have to fill the hande, geyser, boiler with fresh water, and shall decorate with rangavalli, do the avaahana of gangaadi tirthaas – remember the rivers by chanting.

Achamana, saMkalpa………..   kalasha pUja …..
gaMgE cha yamunE chaiva gOdaavarI saraswati |

narmadE siMdu kaavEri jalEsmin sannidhiM kuru | 

gaMgaayai nama: | gaMgaaM asmin kalashE Avaahayaami, arGyapaadyaa AchamaanIyaadi sarvOpachaara pUjaam samarpayaami |

dvaadashanaama pUja  –  naMdinai nama: | nalinyai nama: | sItaayai nama: | maalatyai nama: | malaapahaayai nama: | viShNupaadaabhasaMbhUtaayai nama: | gaMgaayai nama: | tripathagaaminyai nama: | bhaagIrathyai nama: |bhOgavatyai nama: jaahnavyai nama: | tradashEshvaryairnama: |

dhUpaM, dIpaM, gUDaapUpa naivEdyaM samarpayaami | nIraajanaM samarpayaami | naivEdyaM samarpayaami.

After naivEdya samarpaNa, pour the kalasha water to the haMde, boiler, etc.  Next day morning use the water for bath.


ಗಂಗೇ ಚ ಯಮುನೇ ಚೈವ ಗೋದಾವರೀ ಸರಸ್ವತಿ |

ನರ್ಮದೇ ಸಿಂದು ಕಾವೇರಿ ಜಲೇಸ್ಮಿನ್ ಸನ್ನಿಧಿಂ ಕುರು |
***

No comments:

Post a Comment