ನವಗ್ರಹ ಪೀಡಾ ನಿವಾರಣೆ ಜೀವನಶೈಲಿಯನ್ನು ಸರಿಪಡಿಸಿಕೊಂಡರೆ ನವಗ್ರಹಗಳ ಪ್ರಭಾವ ಶಮನವಾಗುತ್ತದೆಯೇ ?
ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಂಡಾಗ ದೈವಕೃಪೆ ತಾನಾಗಿಯೇ ಲಭಿಸುತ್ತದೆ. ಅದು ಹೇಗೆ ಎಂದು ನೋಡೋಣ.
ರವಿಯ ಅನುಗ್ರಹ : ಬೆಳಗಿನ ಜಾವ ಬೇಗನೆ ಎದ್ದು ಮನೆಯನ್ನು ಶುಚಿರ್ಭೂತವನ್ನಾಗಿ ಮಾಡಿ ಸೂರ್ಯನಿಗೆ ನಮಸ್ಕಾರ ಮಾಡುವುದರಿಂದ ಸಾಕಷ್ಟು ಉತ್ತಮ ಪರಿಣಾಮಗಳು ಉಂಟಾಗುತ್ತದೆ. ಸೂರ್ಯನ ಕಿರಣದಲ್ಲಿರುವ 'ಡಿ' ಮತ್ತು 'ಇ' ಪ್ರೊಟೀನ್ ನಿಂದಾಗಿ ಚರ್ಮವು ಕಾಂತಿಯುತವಾಗುತ್ತದೆ. ದಿನವಿಡೀ ಮನಸ್ಸೂ ಉಲ್ಲಸಿತವಾಗಿರುತ್ತದೆ.
ಚಂದ್ರನ ಅನುಗ್ರಹ : ಚಂದ್ರನೆಂದರೆ ನೀರು. ಮನೆಯಲ್ಲಿ ಅಶೌಚ ಇರಬಾರದು. ಎಂಜಲು, ಮುಸುರೆ ಪಾತ್ರೆಗಳಿರಬಾರದು. ತಿಂದ ತಟ್ಟೆಗಳನ್ನು ಕೂಡಲೇ ತೊಳದಿಡುವ ಅಭ್ಯಾಸವನ್ನು ರೂಢಿಸಿಕೊಳ್ಳಬೇಕು. ಮನೆಯ ವಾತಾವರಣ ಶುಭ್ರವಾಗಿದ್ದರೆ ಮನಸ್ಸೂ ಶುಭ್ರವಾಗಿರುತ್ತದೆ.
ಕುಜನ ಅನುಗ್ರಹ : ರಕ್ತಕ್ಕೆ ಅಧಿಪತಿ ಕುಜ. ಅನ್ನಾದಿ ಆಹಾರಗಳ ಸೇವನೆಯಿಂದ ರಕ್ತ ವೃದ್ಧಿಯಾಗುತ್ತದೆ. ಆ ಕಾರಣ 'ಅನ್ನಂ ಬ್ರಹ್ಮ' ಎಂಬ ವೇದವಾಕ್ಯವನ್ನು ಗೌರವಿಸಬೇಕು. ಆಹಾರ ಪದಾರ್ಥವನ್ನು ವೇಸ್ಟ್ ಮಾಡದಂತೆ ಜಾಗ್ರತೆ ವಹಿಸಬೇಕು. ನಿಯಮಿತವಾಗಿ ರಕ್ತ ದಾನವನ್ನು ಮಾಡಬೇಕು. ಅಶಕ್ತರಿಗೆ ಸಹಾಯ ಮಾಡಬೇಕು.
ಬುಧನ ಅನುಗ್ರಹ : ಬುಧ ಬುದ್ದಿಕಾರಕ. ಬುದ್ಧಿ ಹೀನನಾದರೆ ಮಾಡುವ ಕೆಲಸದಲ್ಲೂ ತೊಂದರೆ ಉಂಟಾಗುತ್ತದೆ. ಹಾಗಾಗಿ ಆಡುವ ಮಾತಿನಲ್ಲಿ, ಮಾಡುವ ಕೆಲಸದಲ್ಲಿ ವಿವೇಕವಿರಬೇಕು.
ಗುರುವಿನ ಅನುಗ್ರಹ : ಗುರು ಸಕಲ ದೋಷ ನಿವಾರಕ. ಮಾರ್ಗಸೂಚಕ. ನಮ್ಮಲ್ಲೊಂದು ಲೋಕೋಕ್ತಿಯಿದೆ. 'ಕೋಶ ಓದಬೇಕು ಲೋಕ ಸುತ್ತಬೇಕು' ಅಂತ. ಅರಿವೇ ಗುರು ಎನ್ನುವಂತೆ ಸುತ್ತಣ ಪರಿಸರವನ್ನು ನೋಡಿ ಕಲಿಯಬೇಕು. ಗಿಡ, ಮರಗಳಿಗೆ ನೀರೆಯುವ ಮೂಲಕ ಅವುಗಳನ್ನು ಪೋಷಿಸಬೇಕು.
ಶುಕ್ರನ ಅನುಗ್ರಹ : ಶುಕ್ರನೆಂದರೆ ವೀರ್ಯ. ಪೌಷ್ಟಿಕದಾಯಕ ಆಹಾರ ಸೇವನೆಗೆ ಅಗತ್ಯವಾದ ಹಣ್ಣು, ತರಕಾರಿಗಳನ್ನು ಮನೆಗೆ ತರಬೇಕು. ಕುಟುಂಬ ಸೌಖ್ಯಕ್ಕೆ ಅಗತ್ಯವಾದ ಕಾರ್ಯಗಳನ್ನು ಮಾಡಬೇಕು.
ಶನಿಯ ಅನುಗ್ರಹ : ಶನಿ ಕರ್ಮಾಧಿಪತಿ. ಕರ್ಮಸೂಚಕವಾದ ಪಾದರಕ್ಷೆಗಳನ್ನು ಮನೆಯಾಚೆಯೇ ಬಿಡಬೇಕು. ಮನೆಯನ್ನು ಶುಭ್ರವಾಗಿಟ್ಟುಕೊಳ್ಳಬೇಕು.
ರಾಹುವಿನ ಅನುಗ್ರಹ : ಹೊರಗಿನ ಪಾಪ ಮನೆಯೊಳಗೆ ಎನ್ನುವ ಮಾತಿನಂತೆ ಹೊರಗಿನಿಂದ ಮನೆಯೊಳಗೆ ಪ್ರವೇಶಿಸಿದ ಕೂಡಲೇ ಕೈಕಾಲುಗಳನ್ನು ತೊಳೆದುಕೊಳ್ಳಿ. ಮೂತ್ರ ಅಥವಾ ಮಲ ವಿಸರ್ಜನೆಯ ನಂತರ ಶುದ್ಧಾಚಮನ ಮಾಡಿ. ಕೈಕಾಲುಗಳನ್ನು ತೊಳೆಯಿರಿ.
ಕೇತುವಿನ ಅನುಗ್ರಹ : ಅತಿಥಿ ದೇವೋ ಭವ ಎನ್ನುವುದು ಶಾಸ್ತ್ರೋಕ್ತಿ. ಮನೆಗೆ ಬಂದ ಅತಿಥಿಗಳನ್ನು ಗೌರವಿಸುವುದರಿಂದ ಉತ್ತಮ ಫಲಗಳನ್ನು ಕಾಣಬಹುದು.
***
ನಿಮ್ಮ ಒಂಭತ್ತು ಅಭ್ಯಾಸಗಳು, ಅವುಗಳು ನವಗ್ರಹ ಗಳ ಮೇಲೆ ಮಾಡುವ ಪರಿಣಾಮಗಳು...! ಅದರಿಂದ ನಿಮ್ಮ ಜೀವನ ಮತ್ತು ನಿಮ್ಮ ಮನೆಯ ಮೇಲೆ ಆಗುವ ಪರಿಣಾಮಗಳು...!
೧. ನಿಮಗೆ ಎಲ್ಲಂದರೆ ಅಲ್ಲಿ ಉಗುಳುವ ಅಭ್ಯಾಸವಿದ್ದರೆ, ನಿಮಗೆ ಅಕಸ್ಮಾತ್ ಹೆಸರು ಮತ್ತು ಗೌರವ ಬಂದಲ್ಲಿ, ಅದು ಬಹಳ ದಿನ ಇರಲಾರದು.
ಉಗುಳುವುದನ್ನು ಕೈ ತೊಳೆಯುವ ಬಚ್ಚಲು (wash basin) ನಲ್ಲಿ ಮಾತ್ರ ಉಗಳಬೇಕು. ಆಗ ಮಾತ್ರ ನಿಮ್ಮ ಹೆಸರು ಮತ್ತು ಗೌರವ ಉಳಿಯುತ್ತದೆ.
೨. ಯಾರಿಗೆ ಅವರುಗಳು ತಿಂಡಿ, ತಿನಿಸು, ಊಟ ಮಾಡಿದ ತಟ್ಟೆಗಳನ್ನು /ಪಾತ್ರೆಗಳನ್ನು ಹಾಗೆ ಇಡುವ ಅಭ್ಯಾಸ ಇರುತ್ತದೆಯೋ ಅಂಥಹವರಿಗೆ ಜೀವನದಲ್ಲಿ ಗೆಲವು ಖಾಯಂ ಆಗಿ ಸಿಗುವುದಿಲ್ಲ. ಅಂಥಹವರು ನಿರಂತರ ಹೋರಾಟ ಮಾಡುತ್ತಿರಬೇಕು ಹಾಗೂ ಆದರೂ ಅವರಿಗೆ ಓಳ್ಳೆಯ ಹೆಸರು ಸಿಗುವುದಿಲ್ಲ.
ನೀವು ಉಪಯೋಗಿಸಿದ ತಟ್ಟೆ/ಲೋಟ/ಪಾತ್ರೆಗಳನ್ನು ತೊಳೆದು ಅವುಗಳನ್ನು ಸರಿಯಾದ ಸ್ಥಳದಲ್ಲಿ ಇಡಬೇಕು.
ಹೀಗೆ ಮಾಡುವುದರಿಂದ ಚಂದ್ರ ಮತ್ತು ಶನಿ ಗ್ರಹಗಳನ್ನು ಗೌರವಿಸಿದಂತಾಗಿ ಅವರುಗಳು ಸಂತೃಪ್ತರಾಗುತ್ತಾರೆ.
ಇದರಿಂದ ನಿಮಗೆ ಮನಃಶಾಂತಿ ಸಿಗುತ್ತದೆ ಹಾಗೂ ಕೆಲಸದಲ್ಲಿ ಯಾವುದೇ ಅಡೆ-ತಡೆಗಳಿರುವುದಿಲ್ಲ.
೩. ನಮ್ಮ ಮನೆಗಳಿಗೆ ಯಾರಾದರೂ ಅತಿಥಿಗಳು-ಅಭ್ಯಾಗತರು ಬಂದಾಗ, ಅವರು ಅತಿಥಿಗಳಿರಲಿ ಅಥವಾ ಕೆಲಸದ ನೌಕರರು/ಆಳುಗಳಿರಲಿ ಅವರಿಗೆ ಕುಡಿಯಲು ಲೋಟದಲ್ಲಿ ಶುಧ್ಧ ನೀರನ್ನು ಕೊಡಬೇಕು.
ಹೀಗೆ ಶುಧ್ಧ ನೀರನ್ನು ಕುಡಿಯಲು ಕೊಡುವ ವ್ಯಕ್ತಿಗಳಿಗೆ ರಾಹುಗ್ರಹದಿಂದ ಯಾವುದೇ ದುಷ್ಪರಿಣಾಮಗಳು ಆಗುವುದಿಲ್ಲ. ಹಾಗೂ ಅವರುಗಳ ಜೀವನದಲ್ಲಿ ಯಾವುದೇ ತೊಂದರೆಗಳು/ಅಘಾತಕರ ಘಟನೆಗಳು ಸಂಭವಿಸುವುದಿಲ್ಲ.
೪. ನಮ್ಮ ಮನೆಗಳಲ್ಲಿ ಇರುವ ಗಿಡಗಳು ನಮ್ಮ ಕುಟುಂಬದ ಸದಸ್ಯರಿದ್ದಂತೆ.
ಅವುಗಳಿಗೆ ನಮ್ಮ ಪ್ರೀತಿ ಮತ್ತು ಆರೈಕೆ ಅವಶ್ಯವಿದೆ.
ನಿತ್ಯ ಮುಂಜಾನೆ ಮತ್ತು ಸಂಜೆ ಅವುಗಳಿಗೆ ನೀರು ಉಣಿಸಿದ್ದಲ್ಲಿ, ಗುರು, ಚಂದ್ರ ಮತ್ತು ಸೂರ್ಯ ಗ್ರಹಗಳನ್ನು ಆರಾಧಿಸಿ ಅವುಗಳ ಅನುಗ್ರಹ ಪಡೆದಂತೆ ಆಗುತ್ತದೆ.
ಇದರಿಂದ ನಮಗೆ ಕಷ್ಟಗಳನ್ನು ಧೈರ್ಯದಿಂದ ಎದುರಿಸಿ ಅವುಗಳನ್ನು ನಿವಾರಣೆ ಮಾಡಿಕೊಳ್ಳುವ ಶಕ್ತಿ ಬರುತ್ದದೆ.
ದಿನ ನಿತ್ಯ ಮರಗಿಡಗಳಿಗೆ ನೀರು ಉಣಿಸುವವರಿಗೆ ಮಾನಸಿಕ ಸಮಸ್ಯೆ/ಖಿನ್ನತೆ, ಮಾನಸಿಕ ಒತ್ತಡಗಳು ಎಂದೆಂದಿಗೂ ಆಗುವುದಿಲ್ಲ..!.
೫. ಯಾರು ತಮ್ಮ ಪಾದರಕ್ಷೆ /ಚಪ್ಪಲಿ, ಕಾಲ ಕವಚ (shoes), ಕೈ ಕವಚಗಳು ಮತ್ತು ಕಾಲು ಚೀಲಗಳನ್ನು ಮನೆಗೆ ಬಂದಾಗ ಎಲ್ಲೆಂದರೆ ಅಲ್ಲಿ ಬಿಟ್ಟಿರುತ್ತಾರೆಯೋ/ಎಸೆದಿರುತ್ತಾರೆಯೋ ಅವರಿಗೆ ಅವರ ಶತ್ರುಗಳು ಹೆಚ್ಚಿನ ತೊಂದರೆ ಕೊಡುತ್ತಾರೆ. ಅವುಗಳನ್ನು ಮನೆಗೆ ಬಂದಾಗ ಸರಿಯಾದ ಜಾಗದಲ್ಲಿ ವ್ಯವಸ್ಥಿತವಾಗಿ ಇಟ್ಟಲ್ಲಿ ಶತ್ರುಗಳು ದೂರವಾಗಿ ಸಮಾಜದಲ್ಲಿ ನಿಮ್ಮ ಘನತೆ ಗೌರವಗಳು ಹೆಚ್ಚಾಗುತ್ತವೆ.
೬. ಹಾಸಿಗೆಯಿಂದ ಮುಂಜಾನೆ ಎದ್ದ ನಂತರ ನಿಮ್ಮ ಹಾಸಿಗೆ ಸ್ವಚ್ಚವಾಗಿ ಇಟ್ಟು ಕೊಳ್ಳ ಬೇಕು, ಹಾಗೆ ಇಡದೇ, ನೀವು ಎದ್ದ ನಂತರ ಹಾಸಿಗೆಯ ಹೊದಿಕೆ, ನಿಮ್ಮ ಹೊದಿಕೆ, ತಲೆದಿಂಬುಗಳು ಅಸ್ತವ್ಯಸ್ತವಾಗಿದ್ದರೆ ನಿಮ್ಮನ್ನು ಶನಿ ಮತ್ತು ರಾಹುಗಳು ಕಾಡುತ್ತವೆ. ನೀವು ನಿತ್ಯ ಧರಿಸುವ ಬಟ್ಟೆಗಳು ಸ್ವಚ್ಚ ಇಲ್ಲದಿದ್ದರೆ ನಿಮ್ಮ ನಿತ್ಯದ ಕೆಲಸ ಕಾರ್ಯಗಳು ಎಂದೆಂದಿಗೂ ಸುಗಮವಾಗಿ ನಡೆನಯುವುದಿಲ್ಲ..!
ನೀವೂ ಮತ್ತು ನಿಮ್ಮ ಸುತ್ತಲಿನವರೂ ಸಂತೋಷವಾಗಿರುವುದಿಲ್ಲ.
ಇದನ್ನು ತಡೆಯಲು ನೀವು ಮುಂಜಾನೆ ಎದ್ದ ನಂತರ ನಿಮ್ಮ ಹಾಸಿಗೆಯನ್ನು ಸ್ವಚ್ಚವಾಗಿ ಇಟ್ಟುಕೊಂಡರೆ ನಿಮ್ಮ ದೈನಂದಿನ ಕೆಲಸಗಳು ಸುಗಮವಾಗಿ ನಡೆಯುತ್ತವೆ ಹಾಗೂ ನಿಮ್ಮ ಜೀವನದ ಭಾಗ್ಯದ ಬಾಗಿಲುಗಳು ತೆರೆಯುತ್ತವೆ.
೭. ನಾವು ಯಾವಾಗಲೂ ನಮ್ಮ ಕಾಲುಗಳನ್ನು ಹಾಗೂ ಪಾದಗಳನ್ನು ಸ್ವಚ್ಚವಾಗಿ ಇಟ್ಟುಕೊಳ್ಳಬೇಕು. ಸತ್ಯ ಸಂಗತಿಯೆಂದರೆ ನಾವುಗಳು ಯಾರೂ ಇದರ ಬಗ್ಗೆ ಗಮನ ಹರಿಸುವುದಿಲ್ಲ. ಕೈ ಕಾಲುಗಳನ್ನು ಮತ್ತು ಪಾದಗಳನ್ನು ಸ್ವಚ್ಛತೆ ಬಗ್ಗೆ ಗಮನ ಹರಿಸಬೇಕು. ಮನೆಗೆ ಹೊರಗಿನಿಂದ ಬಂದಾಗ ಮುಖ, ಕೈ ಕಾಲುಗಳನ್ನು ಸ್ವಚ್ಚವಾಗಿ ತೊಳೆದುಕೊಂಡೇ ಮನೆಯ ಒಳಗೆ ಪ್ರವೇಶಿಸಬೇಕು.
ಇದರಿಂದ ನಿಮಗೆ ಮನಃಶಾಂತಿ ಹಾಗೂ ನೆಮ್ಮದಿ ದೊರೆಯುತ್ತದೆ ಹಾಗೂ ಅನವಶ್ಯಕ ಸಿಟ್ಟು ಹಾಗೂ ಮನಸ್ಸಿಗೆ ಕಿರಿ-ಕಿರಿ ಆಗುವುದಿಲ್ಲ ಹಾಗೂ ದಿನಃ ಪೂರ್ತಿ ಸಂತೋಷವಾಗಿರುತ್ತೀರ.
ಇನ್ನಾದರೂ ಈ ಬಗ್ಗೆ ವ್ಯವಸ್ಥೆ ಮಾಡಿಕೊಂಡು, ಅದನ್ನು ಪಾಲಿಸಿ ಜೀವನದಲ್ಲಿ ಆಗುವ ಆಧ್ಬುತ ಬದಲಾವಣೆಗಳನ್ನು ಗಮನಿಸಿರಿ..!
೮. ನೀವು ಪ್ರತಿದಿನ ಮನೆಗೆ ಬರುವಾಗ ಮನೆಯಲ್ಲಿ ಉಪಯೋಗಿಸುವ ಯಾವುದಾದರೂ ವಸ್ತುವನ್ನು ಹೂವು/ಹಣ್ಣು/ತರಕಾರಿ ಕೈಯಲ್ಲಿ ಹಿಡಿದು ಮನೆಗೆ ತರಬೇಕು.
ಹಾಗೆ ಮಾಡಿದರೆ ಅಂತಹ ಮನೆಯಲ್ಲಿ, ಮನೆಯ ಲಕ್ಷ್ಮಿಯು (ಸಂಪತ್ತಿನ ಅಧಿಪತಿ) ಸಂತೋಷದಿಂದ ಮನೆಯಲ್ಲಿ ಖಾಯಂ ಆಗಿ ನೆಲಸುತ್ತಾಳೆ..!
ಅಂತಹ ಮನೆಯಲ್ಲಿ ಮತ್ತು ಮನೆಯ ಸದಸ್ಯರಿಗೆ ಸದಾ ನೆಮ್ಮದಿ, ಸುಖ-ಸಂತೋಷ, ಸಮೃಧ್ಧಿಯಿದ್ದು, ನಿರಂತರ ಅಭಿವೃಧ್ಧಿ ಯಾಗುತ್ತದೆ, ಯಾವಾಗಾಲೂ ಗೆಲವು ಇರುತ್ತದೆ.
೯. ನೀವು ಉಪಹಾರ/ಊಟ ಮಾಡಿದ ತಟ್ಟೆಯಲ್ಲಿ ಯಾವತ್ತೂ ಆಹಾರವನ್ನು ಉಳಿಸಬೇಡಿರಿ.
ಹಾಗೆ ಉಳಿಸಿದರೆ ನವಗ್ರಹಗಳೆಲ್ಲವೂ ನಿಮಗೆ ವಿರೋಧವಾಗಿ ನೀವು ಕಷ್ಟಗಳನ್ನು ಅನುಭವಿಸಬೇಕಾಗುತ್ತದೆ.
ನಿಮ್ಮ ಶುಭ ಸಮಯ ಮತ್ತು ಹಣಕಾಸು ನಿಮ್ಮ ಜೀವನದಿಂದ ಕೈ ಬಿಟ್ಟು ಹೋಗುತ್ತವೆ. ಹಾಗೆ ಆದದ್ದು ನಿಮಗೆ ಗೊತ್ತೇ ಆಗುವುದಿಲ್ಲ...!.
ನಿಮ್ಮ ತಟ್ಟೆ ಪಾತ್ರೆಗಳಲ್ಲಿ ನೀವು ಆಹಾರ ಸ್ವೀಕರಿಸಿದ ನಂತರ ಎಂದೆಂದಿಗೂ ಆಹಾರ ಉಳಿಸುವುದಿಲ್ಲವೆಂದು ಇಂದೇ ಪ್ರತಿಜ್ಞೆಮಾಡಿರಿ.
ನೀವು ತಿಂದ ತಟ್ಟೆಗಳಲ್ಲಿ ಆಹಾರ ಉಳಿಸದೇ ಇದ್ದಲ್ಲಿ ನಿಮಗೆ ನಿಮ್ಮ ಜೀವನದಲ್ಲಿ ಹಣಕಾಸಿನ ಕೊರತೆ ಎಂದಿಗೂ ಆಗುವುದಿಲ್ಲ.
ನಿಮ್ಮ ನಿಮ್ಮ ಅಭ್ಯಾಸಗಳನ್ನು ಗಮನಿಸಿ, ಸೂಕ್ತವಾಗಿ ಬದಲಾವಣೆ ಮಾಡಿಕೊಂಡು ನಿಮ್ಮ-ನಿಮ್ಮ ಮನೆಗಳಲ್ಲಿ ಹಾಗೂ ಜೀವನದಲ್ಲಿ ಸುಖ-ಶಾಂತಿ, ನೆಮ್ಮದಿ ಪಡೆಯಿರಿ....!
***